ವೊಡಾಫೋನ್‌ ಹೊಸ ಸಿಇಒ ಆಗಮಿಸಿದ ಬೆನ್ನಲ್ಲೇ 11 ಸಾವಿರ ಉದ್ಯೋಗ ಕಡಿತ!

Date:

Advertisements
  • ಜಾಗತಿಕವಾಗಿ ಉದ್ಯೋಗ ಕಡಿತ ಮಾಡಿರುವ ವೊಡಾಫೋನ್‌
  • ನಿರೀಕ್ಷಿತ ಆದಾಯ ಬರದ ಹಿನ್ನೆಲೆ ವೆಚ್ಚ ಕಡಿತಕ್ಕೆ ಪ್ರಯತ್ನ

ವೊಡಾಫೋನ್‌ ಐಡಿಯಾದ ಮಾತೃಸಂಸ್ಥೆ ವೊಡಾಫೋನ್‌ಗೆ ಇಟಲಿಯ ಮಾರ್ಗರೆಟಿ ಡೆಲ್ಲಾ ವ್ಯಾಲೆ ಅವರು ಸಿಇಒ ಆಗಿ ನೇಮಕವಾದ ಒಂದು ತಿಂಗಳ ನಂತರ ಜಾಗತಿಕ ಮಟ್ಟದಲ್ಲಿ 11 ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದ್ದಾರೆ.

ಮಾರ್ಗರೆಟಿ ಡೆಲ್ಲಾ ವ್ಯಾಲೆ ಅವರು ಕಳೆದ ಏಪ್ರಿಲ್‌ ತಿಂಗಳಿನಲ್ಲಿ ಸಿಇಒ ಆಗಿ ನೇಮಕಗೊಂಡಿದ್ದರು. ನಿರೀಕ್ಷಿತ ಆದಾಯ ಬರದ ಹಿನ್ನೆಲೆ ವೆಚ್ಚ ಕಡಿತಗೊಳಿಸುವ ದೃಷ್ಟಿಯಿಂದ ಮುಂದಿನ ಮೂರು ವರ್ಷದಲ್ಲಿ 11 ಸಾವಿರ ಉದ್ಯೋಗಿಗಳನ್ನು ತೆಗೆದು ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ.

ಲಂಡನ್​ನಲ್ಲಿ ಮುಖ್ಯಕಚೇರಿ ಹೊಂದಿರುವ ವೊಡಾಫೋನ್ ಸಂಸ್ಥೆಯಲ್ಲಿ ಸುಮಾರು 95,000 ಉದ್ಯೋಗಿಗಳಿದ್ದಾರೆ. ಅದರಲ್ಲಿ ಈಗ 11,000 ಸಿಬ್ಬಂದಿಗಳನ್ನು ಕಡಿತಗೊಳಿಸಲಾಗುತ್ತಿದೆ. ಅಂದರೆ, ಸಂಸ್ಥೆಯ ಶೇ. 10ಕ್ಕಿಂತಲೂ ಹೆಚ್ಚು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ 500 ಉದ್ಯೋಗಿಗಳನ್ನು ಮನೆಗೆ ಕಳಿಸಿದ ಅಮೆಜಾನ್

ಜರ್ಮನಿ ವೊಡಾಫೋನ್​ ಸಂಸ್ಥೆಯ ಅತಿದೊಡ್ಡ ಮಾರುಕಟ್ಟೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಲ್ಲಿ ಲಾಭಕ್ಕೆ ಹೊಡೆತ ಬಿದ್ದಿದೆ. ಈ ಹಿನ್ನಲೆಯಲ್ಲಿ ಅಲ್ಲಿಯೇ ಹೆಚ್ಚು ಉದ್ಯೋಗ ಕಡಿತವಾಗುವ ಸಾಧ್ಯತೆಯಿದೆ. ವರದಿಯ ಪ್ರಕಾರ ಜರ್ಮನಿಯಲ್ಲಿ 1,300 ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಕೆಲ ತಿಂಗಳ ಹಿಂದೆ ಇಟಲಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ವೊಡಾಫೋನ್‌ ಉದ್ಯೋಗಿಗಳನ್ನು ಮನೆಗೆ ಕಳುಹಿಸಲಾಗಿತ್ತು.

ಸಂತಸದ ಸುದ್ದಿ ಏನೆಂದರೆ ಭಾರತದಲ್ಲಿರುವ ವೊಡಾಫೋನ್ ಐಡಿಯಾ ಸಂಸ್ಥೆಯಲ್ಲಿ ಉದ್ಯೋಗ ಕಡಿತಗೊಳ್ಳುವುದಿಲ್ಲ. ವೊಡಾಫೋನ್​ನ ಉದ್ಯೋಗಕಡಿತ ಪ್ರಕ್ರಿಯೆ ಯೂರೋಪಿಯನ್ ಮಾರುಕಟ್ಟೆಗೆ ಮಾತ್ರ ಸೀಮಿತವಾಗಬಹುದು.

“ನಮ್ಮ ಸಾಧನೆ ಉತ್ತಮವಾಗಿಲ್ಲ. ಗ್ರಾಹಕರಿಗೆ ಸರಳ ವ್ಯವಸ್ಥೆ ಮತ್ತು ಸಂಸ್ಥೆಯ ಪ್ರಗತಿ ಇವು ನಮ್ಮ ಆದ್ಯತೆಗಳು. ನಮ್ಮ ಸಂಸ್ಥೆಯ ಸಂಕೀರ್ಣತೆ ನೀಗಿಸಿ ಸರಳಗೊಳಿಸಿ ಸ್ಪರ್ಧಾತ್ಮಕವಾಗಿ ರೂಪುಗೊಳ್ಳುತ್ತೇವೆ” ಎಂದು ಹೊಸ ಸಿಇಒ ಮಾರ್ಗರೆಟಿ ಡೆಲ್ಲಾ ವ್ಯಾಲೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X