ಚಿಕ್ಕಮಗಳೂರು | ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ: ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್

Date:

Advertisements

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ 1989 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 (ಎ) ಚಿಕ್ಕಮಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಚಿಕ್ಕಮಗಳೂರು ನಗರದ ತಾಲೂಕು ಪಂಚಾಯಿತಿ ಡಾ. ಬಿ.ಆರ್. ಅಂಬೇಡ್ಕ‌ರ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್, ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹೊಣೆ ಆಯಾ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಹಾಗೂ ಯೋಜನೆಗಳ ಕುರಿತ ಮಾಹಿತಿಯನ್ನು ಸಮುದಾಯದ ಜನರಿಗೆ ತಲುಪಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು.

ರುದ್ರಭೂಮಿಗೆ ಸಂಬಂಧಿಸಿದಂತೆ ಸ್ಥಳ ಗುರುತಿಸಿ, ಜಮೀನು ಒದಗಿಸಲು ಹಾಗೂ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಥಳ ಗುರುತಿಸಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಟಿತ್ ಕುಮಾರ್ ಸಭೆಯಲ್ಲಿ ತಿಳಿಸಿದರು.

Advertisements

ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕುರುವಂಗಿ ಗ್ರಾಮದ ಸರ್ವೆ ನಂಬ‌ರ್ 42/01 ರಲ್ಲಿ ಸ್ಮಶಾನಕ್ಕೆ ಮೂರು ಎಕರೆ ಜಮೀನು ಮಂಜೂರು ಆಗಿದ್ದು, ಸ್ಥಳ ಪರಿಶೀಲಿಸಲಾಗಿದೆ. ಸದರಿ ಸ್ಥಳದಲ್ಲಿ ಯಾವುದೇ ಒತ್ತುವರಿಯಾಗಿರುವುದು ಕಂಡು ಬಂದಿರುವುದಿಲ್ಲ ಎಂದು ಕೊಪ್ಪ ತಾಲೂಕು ತಹಶೀಲ್ದಾ‌ರ್ ತಿಳಿಸಿದರು.

2024-25ನೇ ಸಾಲಿನಲ್ಲಿ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಹಾನಿಯಾದ ಮನೆಗಳ ಸಂತ್ರಸ್ತರಿಗೆ ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಪರಿಹಾರ ಧನ ಪಾವತಿಸಲು ಕ್ರಮವಹಿಸಲಾಗುತ್ತಿದೆ. ಸಾಗುವಳಿ ಚೀಟಿ ಇಲ್ಲದಿರುವ ಸಂತ್ರಸ್ತರಿಗೂ ಸಹ ಪರಿಹಾರ ಪಾವತಿಗಾಗಿ ಹಾಗೂ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಸಾಗುವಳಿ ಚೀಟಿ ನೀಡುವ ಕುರಿತು ನಿಯಮ ಅನುಸಾರ ಕ್ರಮವಹಿಸಲಾಗುವುದು ಎಂದು ದಲ್ಟಿತ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿದ್ದೀರಾ:http://ರಸ್ತೆ ಇಲ್ಲ, ನೆಟ್‌ವರ್ಕ್ ಇಲ್ಲ; ಮಳೆ ಬಂದ್ರೆ ಹೊರಜಗತ್ತಿನ ಸಂಪರ್ಕವೇ ಇಲ್ಲ! Chikkamagalur | Malenadu | Rainy

ಸಭೆಯಲ್ಲಿ ಕೊಪ್ಪ ತಾಲೂಕು ತಹಶೀಲ್ದಾ‌ರ್ ಲಿಖಿತ, ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿಜಯ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೇವಣ್ಣ ಹಾಗೂ ಅನುಸೂಚಿ ಜಾತಿ ಮತ್ತು ಅನುಸೂಚಿ ಬುಡಕಟ್ಟುಗಳ ದೌರ್ಜನ್ಯ ಸಮಿತಿಯ ಸದಸ್ಯರುಗಳಾದ ಹುಣಸೆಮಕ್ಕಿ ಲಕ್ಷ್ಮಣ, ರಾಜ ಶಂಕ‌ರ್, ಕೆ.ಎಂ. ರಾಮಣ್ಣ ಇನ್ನಿತರರು ಉಪಸ್ಥಿತಿಯಲ್ಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X