ತುಮಕೂರು ಜಿಲ್ಲೆಯಲ್ಲಿ 4 ಶೇಂಗಾ ಖರೀದಿ ಕೇಂದ್ರ ಸ್ಥಾಪನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

Advertisements

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ತುಮಕೂರು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರ ಹಿತದೃಷ್ಠಿಯಿಂದ ಶೇಂಗಾ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕುನ ಎಪಿಎಂಸಿ ಆವರಣದಲ್ಲಿ ತೆರೆಯಬೇಕು. ಶೇಂಗಾ ಖರೀದಿಗಾಗಿ ಕೇಂದ್ರ ಸರ್ಕಾರದ ನಫೆಡ್ ಮತ್ತು ರಾಜ್ಯ ಸರ್ಕಾರದ ಕೆ.ಓ.ಎಫ್.ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಎಫ್.ಎ.ಕ್ಯೂ ನಿಯಾಮಾನುಸಾರ ಪ್ರತಿ ಎಕರೆಗೆ ಒಬ್ಬ ರೈತನಿಂದ 3 ಕ್ವಿಂಟಾಲ್‌ನಂತೆ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಬೀಜವನ್ನು ಖರೀದಿಸಬೇಕು. ಪ್ರತಿ ಕ್ವಿಂಟಾಲ್ ಶೇಂಗಾ ಬೀಜಕ್ಕೆ 6,783 ರೂ.ಗಳ ಬೆಂಬಲ ಬೆಲೆಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.

ಶೇಂಗಾ ಖರೀದಿ ಕೇಂದ್ರಗಳಲ್ಲಿ ನವೆಂಬರ್ 4 ರಿಂದ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ರೈತರಿಂದ ಶೇಂಗಾ ಖರೀದಿಸುವ ಪೂರ್ವದಲ್ಲಿ ಫ್ರೂಟ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ನೋಂದಾಯಿಸಿದ ನಂತರ 90 ದಿನಗಳವರೆಗೆ ಖರೀದಿ ಮಾಡಬೇಕು. ರೈತರ ನೋಂದಣಿಗೆ 45 ದಿನಗಳ ಕಾಲಾವಕಾಶವಿದ್ದು, ಯಾವುದೇ ಗದ್ದಲ-ಗಲಭೆಗಳಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಗೆ ಸೂಚನೆ ನೀಡಿದರು. 

Advertisements

  ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸುಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೂಚಿಸಿದರು.

     ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪ ನಿದೇರ್ಶಕ ಡಾ. ಬಿ.ರಾಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X