‘ಖಲಿಸ್ತಾನಿ ಹೋರಾಟಗಾರರ ವಿರುದ್ಧ ಹಿಂಸಾಚಾರಕ್ಕೆ ಆದೇಶಿಸಿದ್ದೇ ಅಮಿತ್ ಶಾ’; ಕೆನಡಾ ಆರೋಪ

Date:

Advertisements

ಕೆನಡಾದಲ್ಲಿ ನೆಲೆಸಿರುವ ಸಿಖ್ ಪ್ರತ್ಯೇಕತಾವಾದಿ (ಖಲಿಸ್ತಾನ ಬೇಡಿಕೆ) ಗುಂಪುಗಳ ಮೇಲೆ ಹಿಂಸಾಚಾರ ನಡೆಸಲು ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ. ಖಲಿಸ್ತಾನಿ ಹೋರಾಟಗಾರರಿಗೆ ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನ ಹಿಂದೆ ಅಮಿತ್ ಶಾ ಅವರ ಕೈವಾಡವಿದೆ ಎಂದು ತಾವು ಆರೋಪಿಸಿದ್ದಾಗಿ ಕೆನಡಾ ಸಚಿವ ಒಪ್ಪಿಕೊಂಡಿದ್ದಾರೆ.

ಖಲಿಸ್ತಾನಿ ಹೋರಾಟಗಾರರ ವಿರುದ್ಧ ನಡೆಯುತ್ತಿರುವ ಹಿಂಸಾಚಾರಕ್ಕೆ ಅಮಿತ್ ಶಾ ಅವರೇ ಆದೇಶಿಸಿದ್ದಾರೆ ಎಂದು ತಾವು ವಾಷಿಂಗ್ಟನ್‌ ಪೋಸ್ಟ್‌ ತಿಳಿಸಿರುವುದಾಗಿ ಕೆಡನಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್ ಮಾರಿಸನ್ ಹೇಳಿಕೊಂಡಿದ್ದಾರೆ. ತಾವು ಮಾಡಿದ ಆರೋಪದ ಬಗ್ಗೆ ಕನಡಾದ ರಾಷ್ಟ್ರೀಯ ಭದ್ರತಾ ಸಮಿತಿಯ ಸಂಸತ್ ಸದಸ್ಯರಿಗೆ ಮಾರಿಸನ್ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕದ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಾರಿಸನ್, “ಖಲಿಸ್ತಾನಿ ಹೋರಾಟಗಾರರ ಹತ್ಯೆಯ ಹಿಂದೆ ಅಮಿತ್ ಶಾ ಕೈವಾಡವಿದೆ” ಎಂದು ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅವರ ಆರೋಪವು ಭಾರತ ಮತ್ತು ಕೆನಡಾ ನಡುವಿನ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ.

Advertisements

ಇತ್ತೀಚೆಗೆ, ಕೆನಡಾದಲ್ಲಿ ನೆಲೆಸಿದ್ದ ಭಾರತದ ಮೂಲಕದ ಖಲಿಸ್ತಾನಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಾಗಿದೆ. ಈ ಹತ್ಯೆಯನ್ನು ತಾವೇ ಮಾಡಿರುವುದಾಗಿ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್ ಒಪ್ಪಿಕೊಂಡಿದೆ. ಈ ಹತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡವಿದೆ. ಕೆಡನಾದಲ್ಲಿರುವ ಭಾರತದ ರಾಯಭಾರಿ ಕಚೇರಿ ಹತ್ಯೆಗೆ ಸಹಕಾರ ನೀಡಿದೆ. ಲಾರೆನ್ಸ್‌ ಗ್ಯಾಂಗ್‌ಅನ್ನು ಬಳಸಿಕೊಂಡು ಭಾರತ ಸರ್ಕಾರ (ಕೇಂದ್ರ ಸರ್ಕಾರ) ತಮ್ಮ ವಿರೋಧಿಗಳನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಕೆನಡಾ ಆರೋಪಿಸಿತ್ತು.

ಈ ವರದಿ ಓದಿದ್ದೀರಾ?: ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ಬೆಳ್ಳಂಬೆಳಗ್ಗೆ ಕ್ಷಿಪಣಿ ದಾಳಿ

ಈ ಬೆನ್ನಲ್ಲೇ, ಭಾರತ ಮತ್ತು ಕೆನಡಾ ನಡುವೆ ನಿರಂತರ ಆರೋಪ-ಪ್ರತ್ಯಾರೋಪಗಳು ಮುನ್ನೆಲೆಗೆ ಬಂದಿದ್ದವು. ಅಕ್ಟೋಬರ್ 14 ರಂದು, ಕೆನಡಾ ಸರ್ಕಾರವು ಭಾರತೀಯ ಹೈಕಮಿಷನರ್ ಮತ್ತು ಐವರು ರಾಜತಾಂತ್ರಿಕರನ್ನು ಕೆನಡಾದಿಂದ ಹೊರಹಾಕಿತು. ನಂತರ, ಭಾರತ ಸರ್ಕಾರವೂ ಕೂಡ ದೆಹಲಿಯಲ್ಲಿದ್ದ ಕೆನಡಾ ರಾಯಭಾರಿ ಕಚೇರಿಯನ್ನು ಮುಚ್ಚುವುದಾಗಿ ಘೋಷಿಸಿತು. ರಾಜತಾಂತ್ರಿಕರನ್ನು ಭಾರತ ತೊರೆಯುವಂತೆ ನಿರ್ದೇಶಿಸಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X