‘ದೃಶ್ಯಂ’ ಸಿನಿಮಾದಿಂದ ಪ್ರೇರಿತನಾಗಿ ಮಹಿಳೆಯ ಹತ್ಯೆ; ಕೊಲೆ ಆರೋಪಿ ಹೇಳಿಕೆ

Date:

Advertisements

ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ ‘ದೃಶ್ಯಂ’ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು ವರಿದಯಾಗಿದೆ.

ಕಾನ್ಪುರದ ನಿವಾಸಿ ಏಕ್ತಾ ಗುಪ್ತಾ ಅವರು ಜೂನ್ 24ರಂದು ನಾಪತ್ತೆಯಾಗಿದ್ದರು. ಅವರನ್ನು ಜಿಮ್‌ ಟ್ರೈನರ್‌ ವಿಮಲ್ ಸೋನಿ ಅಪಹರಿಸಿದ್ದಾನೆಂದು ಮಹಿಳೆಯ ಪತಿ ರಾಹುಲ್ ಗುಪ್ತಾ ಆರೋಪಿಸಿದ್ದರು. ಪೊಲೀಸರಿಗೆ ದೂರು ನೀಡಿದ್ದರು. ಬಳಿಕ, ಆರೋಪಿ ವಿಮಲ್‌ನನ್ನು ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ, ಆಕೆಯನ್ನು ತಾನೇ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಮೃತದೇಹವನ್ನು ಉನ್ನತ ಸರ್ಕಾರಿ ಅಧಿಕಾರಿಯೊಬ್ಬರ ನಿವಾಸದ ಬಳಿ ಸಮಾಧಿ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಈ ಘಟನೆಯು ಅಜಯ್ ದೇವಗನ್ ಅಭಿನಯದ ‘ದೃಶ್ಯಂ’ ಸಿನಿಮಾದ ಕಥೆಗೆ ಹೋಲಿಕೆಯಾಗುತ್ತದೆ.

Advertisements

2015ರಲ್ಲಿ ಬಿಡುಗಡೆಯಾಗಿದ್ದ ‘ದೃಶ್ಯಂ’ ಸಿನಿಮಾದಲ್ಲಿ ನಾಯಕನು ಕೊಲೆಗೀಡಾದ ವ್ಯಕ್ತಿಯ ಮೃತದೇಹವನ್ನು ಪೊಲೀಸ್‌ ಠಾಣೆಯ ಅಡಿಯಲ್ಲಿ ಹೂತುಹಾಕುವ ದೃಶ್ಯವನ್ನು ಒಳಗೊಂಡಿದೆ. ಆರೋಪಿಯು ‘ದೃಶ್ಯಂ’ ಸನಿಮಾವನ್ನು ಹಲವಾರು ಬಾರಿ ವೀಕ್ಷಿಸಿದ್ದನು. ಆ ದೃಶ್ಯಗಳು ಮಹಿಳೆಯ ಮೃತದೇಹವನ್ನು ಐಷಾರಾಮಿ ಪ್ರದೇಶದಲ್ಲಿ ಹೂತುಹಾಕುವ ಯೋಜನೆಯನ್ನು ಆರೋಪಿಯಲ್ಲಿ ಹುಟ್ಟುಹಾಕಿದ್ದವು. ಈ ಬಗ್ಗೆ ಆರೋಪಿಯೇ ವಿವರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ನಡೆದ ದಿನದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆಯಲಾಗಿದೆ. ಮೃತ ಮಹಿಳೆ ಮತ್ತು ಆರೋಪಿ ಜಿಮ್ ಟ್ರೈನರ್‌ ನಡುವೆ ವಿವಾಹೇತರ ಸಂಬಂಧ ಹೊಂದಿದ್ದರು. ಇತ್ತೀಚಗೆ, ಆರೋಪಿಗೆ ವಿವಾಹ ನಿಶ್ಚಯವಾಗಿದ್ದರಿಂದ ಮಹಿಳೆ ಅಸಮಾಧಾನಗೊಂಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಆಕೆಯನ್ನು ಆರೋಪಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಲ್ ಸೋನಿ ಕೆಲಸ ಮಾಡುತ್ತಿದ್ದ ಜಿಮ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಕಟ್ಟಡವೊಂದರಲ್ಲಿ ಆಕೆಯ ಮೃತದೇಹ ದೊರೆತಿದೆ. ಆ ಕಟ್ಟಡದ ಒಂದು ಭಾಗದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಅವರ ಕುಟುಂಬವು ವಾಸಿಸುತ್ತಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X