ಮೈಸೂರು | ಕನ್ನಡ ಬೆಳಗಲಿ – ಹಿಂದಿ ತೊಲಗಲಿ: ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ

Date:

Advertisements

ಮೈಸೂರು ನಗರದ ಜೆಎಸ್ಎಸ್ ವಿದ್ಯಾಪೀಠ ವೃತ್ತದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ಸಂಘಟನೆಯವರು ‘ಕನ್ನಡ ಬೆಳಗಲಿ – ಹಿಂದಿ ತೊಲಗಲಿ’ ಎಂದು ಘೋಷಣೆ ಕೂಗುತ್ತಾ, ಪ್ರತಿಭಟನೆ ನಡೆಸಿದರು.

ನವೆಂಬರ್ ತಿಂಗಳು ಕನ್ನಡ ರಾಜ್ಯೋತ್ಸವಕ್ಕೆ ಸೀಮಿತ ಮಾಡದೆ, ಒಂದು ತಿಂಗಳು ನಿರಂತರ ಸಂಭ್ರಮದ ಆಚರಣೆಯಾಗದೆ, ದೈನಂದಿನ ಬದುಕಾಗಿ, ಕನ್ನಡತನ ಮೆರೆಯುವ ಕೆಲಸ ಆಗಬೇಕಿದೆ. ಕನ್ನಡದ ಬಗ್ಗೆ ಜಾಗೃತಿ ಮೂಡಿಸಿ, ಅರಿವನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಇತಿಹಾಸ ತಜ್ಞ ನಂಜರಾಜ ಅರಸ್ ಕರೆ ನೀಡಿದರು.

ಬ್ಯಾಂಕ್, ಪೋಸ್ಟ್ ಆಫೀಸ್, ರೈಲು ನಿಲ್ದಾಣ ಎಲ್ಲೆಲ್ಲೂ ಉತ್ತರ ಭಾರತೀಯರ ಹಾವಳಿ ಹೆಚ್ಚಿದ್ದು, ಕನ್ನಡ ಮರೆತಿದ್ದಾರೆ. ಕನ್ನಡ ನೆಲದಲ್ಲಿ ಕನ್ನಡದ ಅರಿವನ್ನು ಮೂಡಿಸಬೇಕು. ಕನ್ನಡದಲ್ಲಿ ವ್ಯವಹರಿಸಬೇಕು. ಬೇರೆ ರಾಜ್ಯಗಳಿಂದ ಬಂದು ಇಲ್ಲಿ ನೆಲೆಸಿರುವವರಿಗೆ ನಮ್ಮ ನಾಡಿನ ಭಾಷೆಗೆ ಬೆಲೆ ಕೊಡುವುದನ್ನು ಕಲಿಸಬೇಕಿದೆ ಎಂದು ತಿಳಿಸಿದರು.

Advertisements

ಇಲ್ಲಿಯ ನೀರು, ಇಲ್ಲಿಯ ಅನ್ನ ಕನ್ನಡ ಮಾತ್ರ ಬೇಡ ಎನ್ನುವವರಿಗೆ ಕನ್ನಡದ ಮಹತ್ವ ಸಾರಬೇಕಿದೆ. ಬರೀ ಆಚರಣೆಗೆ ಸೀಮಿತವಾಗದೇ ಕನ್ನಡ ಅನುಸರಣೆ ದೈನಂದಿನ ಕರ್ತವ್ಯವಾಗಿ ಪಾಲನೆ ಮಾಡುವಂತೆ ಮಾಡಬೇಕು ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ಮೈಸೂರು | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಏಕಾಏಕಿ ಪರೀಕ್ಷಾ ಶುಲ್ಕ ಪಾವತಿಸಲು ಒತ್ತಾಯ: ಎಐಡಿಎಸ್ಓ ಪ್ರತಿಭಟನೆ

ಸಾಮಾಜಿಕ ಹೋರಾಟಗಾರ್ತಿ ಯಮುನಾ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರು ಉದ್ಯೋಗ ವಂಚಿತರಾಗಿ, ಬೇರೆ ರಾಜ್ಯದವರಿಗೆ ಮಣೆ ಹಾಕುವಂತಹ ಕೆಲಸ ಆಗುತ್ತಿದೆ. ಇನ್ನಾದರೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು. ಹೊರ ರಾಜ್ಯದವರು ಕನ್ನಡ ಕಲಿತು ಕನ್ನಡದಲ್ಲಿ ವ್ಯವಹರಿಸಬೇಕು, ಕನ್ನಡವನ್ನು ಒಂದು ದಿನದ, ಒಂದು ತಿಂಗಳ ಆಚರಣೆ ಅನ್ನದೆ ದಿನನಿತ್ಯ ನಾವುಗಳು ಅನುಸರಿಸಿ, ಬೇರೆಯವರಿಗೂ ಅನುಸರಿಸುವಂತೆ ಮಾಡುವ ಹೊಣೆಗಾರಿಕೆ ನಮ್ಮದು ಎಂದರು.

ಪ್ರತಿಭಟನೆಯಲ್ಲಿ ಡಿಪಿಕೆ ಪರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X