69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Date:

Advertisements

ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಈ ಕುರಿತು ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

Advertisements

ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ ಇವರ ಹೆಸರು, ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ನರಸಿಂಹಲು, ಬೀದ‌ರ್ ಜಿಲ್ಲೆ ಇವರನ್ನು ಸಹ ಸೇರಿದಂತೆ ಈ ಪೈಕಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದರು.

ಸಂಪೂರ್ಣ ಪಟ್ಟಿ ಇಲ್ಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X