ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

Date:

Advertisements

ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕು ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಮಾರಿಕೊಟ್ಟೈ ತೆಪ್ಪಗಾರರು ತಮಿಳುನಾಡು ಗಡಿ ಪೊಲೀಸರಿಂದ ಕಿರುಕುಳ, ದೌರ್ಜನ್ಯ,ಅವಾಚ್ಯ ನಿಂದನೆಗೆ ಬೇಸತ್ತು ಸೋಮವಾರದಿಂದ ಹೊಗೇನಕಲ್ ಫಾಲ್ಸ್‌ ತೆರಳುವ ತೆಪ್ಪ ಸಂಚಾರ ಸ್ಥಗಿತಗೊಳಿಸಿದ್ದರು.

ಇದರಿಂದಾಗಿ ಹೊಗೇನಕಲ್ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ತೊಂದರೆ ಆಗುತ್ತಿರುವುದನ್ನು ಮನಗಂಡ ಎರಡು ರಾಜ್ಯಗಳ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಸಮಸ್ಯೆ ಆಲಿಸಿದರು.

ತಮಿಳುನಾಡು ಪೆರುಣಾಗಂ ಪೊಲೀಸ್ ಠಾಣೆ ಡಿವೈಎಸ್ಪಿ ರಾಜಸುಂದರಂ,ಇನ್ಸ್ಪೆಕ್ಟರ್ ಮುರುಳಿ, ಗೋಪಿನಾಥಮ್ ಅರಣ್ಯ ವಲಯ ಡಿಆರ್‌ಫ್ಓ ದಿನೇಶ್, ಉಪ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿಗಳು ತೆಪ್ಪಗಾರರ ಜೊತೆ ಮಾತುಕತೆ ನಡೆಸಿದರು.

Advertisements
WhatsApp Image 2024 10 31 at 2.33.36 PM

ನದಿಯಲ್ಲಿ ಒಂದು ಕರ್ನಾಟಕದ ಕಡೆಯಿಂದ ತಮಿಳುನಾಡು ಗಡಿ ಕಡೆಗೆ ಕರೆದುಕೊಂಡು ಹೋಗಲು, ಪ್ರವಾಸಿಗರನ್ನು ಮತ್ತೆ ಕರೆತರಲು ಯಾವುದೇ ಅಡ್ಡಿ ಇಲ್ಲ. ಆಯಕಟ್ಟಿನ ಪ್ರದೇಶವಾಗಿದ್ದು, ಇಲ್ಲಿ ಈಜುವುದು, ಸೆಲ್ಫಿ ಇದ್ಯಾವುದಕ್ಕೂ ಆಸ್ಪದ ಇಲ್ಲ. ಪ್ರವಾಸಿಗರ ಕ್ಷೇಮ ಮುಖ್ಯವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ ವಿವಾದ | ಫಲಿಸಿತು ಬಿಜೆಪಿ (ಕು)ತಂತ್ರ; ಕಡಕೋಳದಲ್ಲಿ ಭುಗಿಲೆದ್ದ ಕೋಮು ಗಲಭೆ

ಇದರಿಂದ ಸಮಾಧಾನಗೊಂಡ ತೆಪ್ಪಗಾರರು ಹೊಗೇನಕಲ್ ಫಾಲ್ಸ್ ವೀಕ್ಷಣೆಗೆ ಸಂಚಾರ ಆರಂಭ ಮಾಡಿದ್ದಾರೆ. ಮೂಲಕ ಜಂಟಿ ಪೊಲೀಸ್ ಸಭೆ ಯಶಸ್ವಿಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X