ಉತ್ತರ ಪ್ರದೇಶ | ಚಾಕುವಿನಿಂದ ಇರಿದು ಎಎನ್‌ಐ ಪತ್ರಕರ್ತನ ಕೊಲೆ

Date:

Advertisements

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಸುದ್ದಿಸಂಸ್ಥೆ ಎಎನ್‌ಐ ಪತ್ರಕರ್ತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. 38 ವರ್ಷದ ಪತ್ರಕರ್ತ ದಿಲೀಪ್ ಸೈನಿ ಮೇಲೆ ದಾಳಿ ನಡೆಸಿದ ವೇಳೆ ಪತ್ರಕರ್ತನ ಜೊತೆಗಿದ್ದ ಅವರ ಸ್ನೇಹಿತ, ಬಿಜೆಪಿ ಮುಖಂಡರೊಬ್ಬರ ಮೇಲೆಯೂ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಭೂಮಿಗೆ ಸಂಬಂಧಿಸಿದ ಕೆಲವು ವಿವಾದಗಳಿಂದಾಗಿ ಹತ್ಯೆ ನಡೆದಿದೆ ಎನ್ನಲಾಗಿದೆ. ಪತ್ರಕರ್ತನ ಸ್ನೇಹಿತ, ಬಿಜೆಪಿ ಮುಖಂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈನಿ ಅವರ ಸ್ನೇಹಿತ ಹಾಗೂ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖಂಡ ಶಾಹಿದ್ ಖಾನ್ ಅವರು ದಿಲೀಪ್ ಸೈನಿ ಅವರನ್ನು ರಕ್ಷಿಸಲು ಯತ್ನಿಸಿದಾಗ ಅವರ ಮೇಲೆಯೂ ದಾಳಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

Advertisements

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ದಾರುಣ ಸಾವು

“ನಾವು ದಿಲೀಪ್ ಸೈನಿ ಜೊತೆ ರಾತ್ರಿ ಊಟ ಮಾಡುತ್ತಿದ್ದೆವು. ಈ ವೇಳೆ ಅವರು (ದಾಳಿ ನಡೆಸಿದವರು) ಒಳಗೆ ಬಂದು ದಿಲೀಪ್‌ಗೆ ಇರಿದಿದ್ದಾರೆ. ನಾನು ಅವರನ್ನು ಕಾಪಾಡಲು ಯತ್ನಿಸಿದೆ. ಆಗ ನನಗೂ ಇರಿದಿದ್ದಾರೆ. ಗುಂಡು ಕೂಡಾ ಹಾರಿಸಿ ಸೈನಿ ಹತ್ಯೆ ಮಾಡಿದ್ದಾರೆ” ಎಂದು ಶಾಹಿದ್ ಖಾನ್ ಹೇಳಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯೇ ದಿಲೀಪ್ ಸೈನಿ ಸಾವನ್ನಪ್ಪಿದ್ದಾರೆ. ಶಾಹಿದ್ ಖಾನ್ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ನಂತರ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫತೇಪುರ್ ಪೊಲೀಸ್ ಮುಖ್ಯಸ್ಥ ಧವಲ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

“ನಾವು ಪ್ರಕರಣವನ್ನು ದಾಖಲಿಸಿ ಎಲ್ಲಾ ಸಂಗತಿಗಳನ್ನು ಪರಿಶೀಲಿಸಲಾಗುವುದು. ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X