ತಿರುಪತಿಯಲ್ಲಿ ಕೆಲಸ – ಹಿಂದುಗಳಿಗಷ್ಟೇ ಅವಕಾಶ, ಇತರರಿಗೆ ವಿಆರ್‌ಎಸ್‌; ಕೋಮುದ್ವೇಷಕ್ಕೆ ಬಲಿಯಾಯ್ತಾ ಟಿಟಿಡಿ?

Date:

Advertisements

ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸ ಮಾಡುವವ ಎಲ್ಲರೂ ಹಿಂದುಗಳೇ ಆಗಿಬೇಕು. ಹಿಂದುಯೇತರರಿಗೆ ವಿಆರ್‌ಎಸ್‌ (ವಾಲೆಂಟಿಯರ್ ರಿಟೈರ್ಮೆಂಟ್) ಕೊಟ್ಟು ನಿವೃತ್ತಿ ಹೆಸರಿನಲ್ಲಿ ಹೊರದಬ್ಬಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತೀರ್ಮಾನಿಸಿದೆ.

ಇತ್ತೀಚೆಗಷ್ಟೇ ಟಿಟಿಡಿ ಅಧ್ಯಕ್ಷರಾಗಿ ಬಿ.ಆರ್ ನಾಯ್ಡು ನೇಮಕಗೊಂಡಿದ್ದಾರೆ ಅವರ ನೇಮಕದ ಬಳಿಕ, ತಿರುಮಲ ದೇವಾಲಯ ಪದೇ-ಪದೇ ಸುದ್ದಿಗೆ ಗ್ರಾಸವಾಗಿದೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡು ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ, ಹಿಂದುಗಳಿಗೆ ಮಾತ್ರ ಕೆಲಸವೆಂಬ ನೀತಿ-ನಿರ್ಧಾರಗಳು ಹೊರಬರುತ್ತಿದೆ. ಈ ನಿರ್ಧಾರವು ಟಿಟಿಡಿ ಕೋಮುವಾದಿ, ಕೋಮುದ್ವೇಷದ ರಾಜಕಾರಣಕ್ಕೆ ತುತ್ತಾಗಿದೆಯೇ ಎಂಬ ಅನುಮಾನವನ್ನೂ ಹುಟ್ಟುಹಾಕಿದೆ. ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಈ ಅನುಮಾನಗಳಿಗೆ ಪುಷ್ಠಿ ನೀಡುತ್ತದೆ.

ಶುಕ್ರವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಅಧ್ಯಕ್ಷ ಬಿ.ಆರ್ ನಾಯ್ದು, “ತಿತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದುಗಳಾಗಿರಬೇಕು. ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು? ಅವರನ್ನು ಸರ್ಕಾರದ ಬೇರೆ ಇಲಾಖೆಗಳಿಗೆ ವರ್ಗಾಹಿಸಬೇಕೇ ಅಥವಾ ವಿಆರ್‌ಎಸ್ ನೀಡಬೇಕೇ ಎಂಬುದುರ ಬಗ್ಗೆ ಆಂಧ್ರ ಸರ್ಕಾರದೊಂದಿಗೆ ಚರ್ಚಿಸುತ್ತೇವೆ” ಎಂದಿದ್ದಾರೆ.

Advertisements

“ತಿರುಮಲದಲ್ಲಿ ಕೆಲಸ ಮಾಡಲು ಹಿಂದುಗಳಿಗೆ ಮಾತ್ರ ಅವಕಾಶ ಇರಬೇಕು. ಅದೇ ನನ್ನ ಮೊದಲ ಗುರಿ. ಅದಕ್ಕಾಗಿ ಪ್ರಯತ್ನಿಸುತ್ತೇನೆ” ಎಂದು ನಾಯ್ಡು ಹೇಳಿದ್ದಾರೆ.

ಬಿ ಆರ್ ನಾಯ್ಡು ಅವರು ‘ಹಿಂದು ಭಕ್ತಿ ಚಾನೆಲ್’ ಸೇರಿದಂತೆ ಹಲವು ತೆಲುಗು ವಾಹಿನಿಗಳನ್ನು ನಡೆಸುತ್ತಿದ್ದಾರೆ. ಆರ್‌ಎಸ್‌ಎಸ್‌, ಬಿಜೆಪಿ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X