ಸ್ಪಿನ್ನರ್‌ಗಳ ದಾಳಿಗೆ 235 ರನ್‌ಗಳಿಗೆ ಕಿವೀಸ್ ಆಲೌಟ್: ದಾಖಲೆ ಬರೆದ ರವೀಂದ್ರ ಜಡೇಜಾ

Date:

Advertisements

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ದಾಳಿಗೆ ಸಿಲುಕಿದ ಕಿವೀಸ್‌ ತಂಡ 65.4 ಓವರ್‌ಗಳಲ್ಲಿ 235 ರನ್‌ಗಳಿಗೆ ಆಲೌಟ್‌ ಆಗಿದೆ.

ರವಿಂದ್ರ ಜಡೇಜಾ 65/5 ವಿಕೆಟ್‌ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್ 81/4 ವಿಕೆಟ್ ಕಿತ್ತರು. ನ್ಯೂಜಿಲೆಂಡ್‌ ಪರ ಡೇರಿಲ್ ಮಿಚೆಲ್ (82) ಹಾಗೂ ವಿಲ್‌ ಯಂಗ್‌ (71) ರನ್‌ ಗಳಿಸಿ ತಂಡ 200ರ ಗಡಿ ದಾಟಲು ನೆರವಾದರು.

ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಟಾಮ್ ಲೇಥಮ್ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಡೆವೊನ್ ಕಾನ್ವೆ ಅವರನ್ನು ಆಕಾಶ್‌ ದೀಪ್‌ ಪೆವಿಲಿಯನ್‌ಗೆ ಕಳಿಸಿದರೆ, ಉಳಿದ 9 ಆಟಗಾರರು ಜಡೇಜಾ ಹಾಗೂ ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ದಾಳಿಗೆ ಔಟಾದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇ‍‍ಷ | ಮಹಿಳಾ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು?

ದಾಖಲೆ ಬರೆದ ರವೀಂದ್ರ ಜಡೇಜಾ

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಮೊದಲ ಐದರ ಪಟ್ಟಿಗೆ ಲಗ್ಗೆ ಇಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 312 ವಿಕೆಟ್‌ಗಳನ್ನು ಗಳಿಸಿದ್ದಾರೆ.
ಆ ಮೂಲಕ ಮಾಜಿ ವೇಗಿಗಳಾದ ಜಹೀರ್ ಖಾನ್ (311) ಮತ್ತು ಇಶಾಂತ್ ಶರ್ಮಾ (311) ದಾಖಲೆಯನ್ನು ಮುರಿದಿದ್ದಾರೆ.

ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (619) ಮುಂಚೂಣಿಯಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ (533), ಕಪಿಲ್ ದೇವ್ (434) ಮತ್ತು ಹರಭಜನ್ ಸಿಂಗ್ (417) ಅನುಕ್ರಮವಾಗಿ ನಂತರದ ಸ್ಥಾನದಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X