ಕನ್ನಡ ಬೆಳೆಯಲು ಸರ್ಕಾರಿ ಶಾಲೆಗಳು ಉಳಿಯಬೇಕು; ಆದರೆ…

Date:

Advertisements

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ, ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು, ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತೇ?;

  1. 6,400 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು!
  2. 50 ಅಥವಾ 50ಕ್ಕಿಂತ ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳ ಸಂಖ್ಯೆ -23,342
  3. 2023-24 ರಲ್ಲಿ 3,363 ಮಕ್ಕಳನ್ನು ಆರ್‌ ಟಿ ಇ ಅಡಿಯಲ್ಲಿ ಖಾಸಗಿ ಶಾಲೆಗೆ ದಾಖಲಿಸಲು ಸರ್ಕಾರ ಖರ್ಚು ಮಾಡಿದ ಹಣ -364 ಕೋಟಿ!
  4. 46473 ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ -42,75,354 –ಅಂದರೆ,ಸರ್ಕಾರಿ ಶಾಲೆಗಳಲ್ಲಿ ಸರಾಸರಿ ಮಕ್ಕಳು -92
  5. 16299 ಖಾಸಗಿ ಶಾಲೆಗಳಲ್ಲಿ ದಾಖಲಾತಿ 46,74,481- ಅಂದರೆ, ಖಾಸಗಿ ಶಾಲೆಗಳಲ್ಲಿ ಸರಾಸರಿ ಮಕ್ಕಳು-287
  6. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ -43,133
  7. ಸರ್ಕಾರಿ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಹುದ್ದೆ -10,168
  8. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಸಂಖ್ಯೆ-ಸುಮಾರು 40,000
  9. 2028-29 ರ ವೇಳೆಗೆ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಸಂಖ್ಯೆ -34,807.
  10. 2028-29 ರ ವೇಳೆಗೆ ಪ್ರೌಢ ಶಾಲೆಯಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಸಂಖ್ಯೆ-4,128

ಮುಂದಿನ 10 ವರ್ಷಗಳಲ್ಲಿ, ನಮ್ಮ ಮಕ್ಕಳು ಕನ್ನಡ ಕಲಿಯುವ ಕನ್ನಡದ ತೊಟ್ಟಿಲುಗಳಾದ ಸರ್ಕಾರಿ ಕನ್ನಡ ಶಾಲೆ ಏನಾಗಬಹುದೆಂದು ಮತ್ತು ಕನ್ನಡ ಹೇಗೆ ಉಳಿದು -ಬೆಳೆಯಬಹುದು ಯೋಚಿಸಿ?

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮತ್ತೊಂದು ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಸರ್ಕಾರ ತನ್ನದೇ ಆಯ್ದ ಸರ್ಕಾರೀ ಮತ್ತು ಕೆಪಿಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆದು ಸರ್ಕಾರಿ ಕನ್ನಡ ಶಾಲೆಗಳಲ್ಲಿರುವ‌ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೆ ಸೆಳೆಯುತ್ತಿದೆ . ಸರ್ಕಾರಿ ಕನ್ನಡ ಶಾಲೆಗಳು ತಮ್ಮ‌ ಉಳಿವಿಗಾಗಿ ತಮ್ಮದೇ ಸರ್ಕಾರಿ ಆಂಗ್ಲ ಮಾಧ್ಯಮದ ಶಾಲೆಗಳ ವಿರುದ್ಧವೇ ಹೋರಾಡಬೇಕಾದ ವಿಪರ್ಯಾಸ ಸೃಷ್ಟಿಯಾಗಿದೆ.

Advertisements

ಈ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವುದು ಅರ್ಥಪೂರ್ಣ ರಾಜ್ಯೋತ್ಸವವಾದೀತು!

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ನಿರಂಜನಾರಾಧ್ಯ ವಿ ಪಿ
ನಿರಂಜನಾರಾಧ್ಯ ವಿ ಪಿ
ಅಭಿವೃದ್ಧಿ ಶಿಕ್ಷಣ ತಜ್ಞ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X