ಗುಬ್ಬಿ | ಇಂಗ್ಲೀಷ್ ವ್ಯಾಮೋಹ ಕನ್ನಡಕ್ಕೆ ದಕ್ಕೆ ತರುವ ಮುನ್ನ ಎಚ್ಚೆತ್ತುಕೊಳ್ಳಿ : ಶಾಸಕ ಎಸ್.ಆರ್.ಶ್ರೀನಿವಾಸ್.

Date:

Advertisements

ಗ್ರಾಮೀಣ ಭಾಗದಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚುವ ಹಂತ ತಲುಪಿದೆ. ಇಂಗ್ಲೀಷ್ ವ್ಯಾಮೋಹದಿಂದ ಕಾಂನ್ವೆಂಟ್ ಶಾಲೆಗೆ ಮಕ್ಕಳನ್ನು ಸೇರಿಸಿ ಪ್ರತಿಷ್ಠೆಯತ್ತ ಸಾಗುತ್ತಾರೆ. ಈ ವ್ಯಾಮೋಹದಿಂದ ಕನ್ನಡಕ್ಕೆ ದಕ್ಕೆ ಬರುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಆಯೋಜಿಸಿದ್ದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ಕನ್ನಡ ಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ಇಂತಹ ನಮ್ಮ ಭಾಷೆಯ ಪರಂಪರೆಯ ಮಹಿಮೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದರು.

ಅನ್ಯ ಭಾಷೆ ವ್ಯಾಮೋಹ ತೊರೆದು ಮಾತೃಭಾಷೆ ಕನ್ನಡ ಎತ್ತಿ ಹಿಡಿಯುವ ಕೆಲಸ ನಮ್ಮ ಯುವಕರು ಮಾಡಬೇಕಿದೆ. ಕನ್ನಡ ಉಳಿದಿರುವುದು ಗ್ರಾಮಗಳಲ್ಲಿ ಮಾತ್ರ. ಈ ಹಿನ್ನಲೆ ನಮ್ಮ ಭಾಷೆಯ ಬಗ್ಗೆ ಹೆಮ್ಮೆ ಬೆಳೆಸಿಕೊಂಡು ಅನ್ಯ ಭಾಷಿಕರಿಗೂ ನಮ್ಮ ಭಾಷೆ ಕಲಿಸಿ ಮುನ್ನಡೆಯಬೇಕಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಏಕೈಕ ನಮ್ಮ ಕನ್ನಡ ಸಾಹಿತ್ಯ ಮೇರು ಸ್ಥಾನದಲ್ಲಿದೆ. ಇದೇ ಸಂದರ್ಭದಲ್ಲಿ ಕನ್ನಡ ಶಾಲೆ ಉಳಿಸುವ ಕೆಲಸಕ್ಕೆ ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು.

Advertisements

ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ತಹಶೀಲ್ದಾರ್ ಬಿ.ಆರತಿ, ಕನ್ನಡ ಇತಿಹಾಸದಲ್ಲಿ ಮಾತೃಭಾಷೆಗೆ ಮಹತ್ವ ಸಾಕಷ್ಟಿದೆ. ಆಡಳಿತಾತ್ಮಕವಾಗಿ ಕನ್ನಡ ಜಾರಿಯಾಗಿದೆ. ಇದೇ ಮಾದರಿ ಉದ್ಯೋಗದಲ್ಲಿ ಕನ್ನಡಕ್ಕೆ ಅವಕಾಶ ಸಿಗಬೇಕಿದೆ. ಖಾಸಗಿ ರಂಗದಲ್ಲಿ ಸಹ ತಾಯಿಭಾಷೆಗೆ ಮನ್ನಣೆ ಸಿಗಬೇಕಿದೆ. ಕನ್ನಡ ಏಕೀಕರಣ ಸಾಧಿಸಿ ಕರ್ನಾಟಕ ಎಂದು ನಾಮಕರಣಗೊಂಡ ಬಳಿಕ ಭಾಷೆಗೆ ತನ್ನದೇ ವರ್ಚಸ್ಸು ಬಂದಿತ್ತು. ಈ ನಿಟ್ಟಿನಲ್ಲಿ 69 ನೇ ರಾಜ್ಯೋತ್ಸವ ನಿತ್ಯ ಉತ್ಸವ ಆಗಬೇಕು ಎಂದು ಕರೆ ನೀಡಿದರು.

ಉಪನ್ಯಾಸಕ ಡಾ.ಮೂರ್ತಿ ತಿಮ್ಮನಹಳ್ಳಿ ಮಾತನಾಡಿ ಎರಡು ಸಾವಿರ ವರ್ಷದ ಇತಿಹಾಸವಿರುವ ನಮ್ಮ ಭಾಷೆಯು ಸಾಹಿತ್ಯ ಜಗತ್ತಿನಲ್ಲಿ ಉನ್ನತ ಸ್ಥಾನ ಪಡೆದುಕೊಂಡಿದೆ. ವಿಭಿನ್ನ ಜನರನ್ನು ಪಡೆದ ಕನ್ನಡಾಂಬೆ ಎಲ್ಲಾ ಭಾಷಿಕರನ್ನು ಸಾಕುತ್ತಿದೆ. ವ್ಯಾವಹಾರಿಕ ಭಾಷೆ ಕನ್ನಡ ಆದಂತೆ ಉದ್ಯೋಗದಲ್ಲಿ ಮಾತೃ ಭಾಷೆ ಮೆರೆದು ಅನ್ನದ ಭಾಷೆಯಾಗಬೇಕು ಎಂದ ಅವರು ಕನ್ನಡದ ಸಂಪೂರ್ಣ ಇತಿಹಾಸ ತಿಳಿಸಿದರು.

ಇದೇ ಸಂದರ್ಭದಲ್ಲಿ ಒಂಬತ್ತು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ತಾಪಂ ಇಓ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಸೇರಿದಂತೆ ಎಲ್ಲಾ ಪಪಂ ಸದಸ್ಯರು, ಎಲ್ಲಾ ಇಲಾಖಾಧಿಕಾರಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X