ನಕಲಿ ಅಂಕಪಟ್ಟಿ | 51 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು: ವಿಟಿಯು

Date:

Advertisements

ನಕಲಿ ಅಂಕಪಟ್ಟಿ ಮತ್ತು ದಾಖಲೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವು (ವಿಟಿಯು) 51 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು ಪಡಿಸಿದೆ.

ಮೊದಲ ವರ್ಷದ ಎಂಜಿನಿಯರಿಂಗ್ ಪ್ರವೇಶಾತಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಒಎಸ್)ನಿಂದ ಅಂಕಪಟ್ಟಿ ತೆಗೆದುಕೊಂಡಿರುವದಾಗಿ 51 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶದ ಅಂಕಪಟ್ಟಿ ಸಲ್ಲಿಸಿದ್ದರು. ಆದರೆ, ಅವು ನಕಲಿ ಅಂಕಪಟ್ಟಿಗಳು ಎನ್ನಲಾಗಿದೆ.

ದಾಖಲೆಗಳ ಪರಿಶೀಲನೆಯಲ್ಲಿ ‌ಕ್ಯೂ‌ಆರ್ ಕೋಡ್ ಸ್ಕ್ಯಾನ್ ನಡೆಸಿದಾಗ ಅಕ್ರಮ ದೃಢಪಟ್ಟಿದೆ. ಇದಕ್ಕೂ ಮುನ್ನ ಎಲ್ಲ ಅಂಕಪಟ್ಟಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆ ಮಾನ್ಯ ಮಾಡಿತ್ತು. ಆದರೆ, ಕಾಲೇಜುವಾರು ಅನುಮೋದನೆ ‌ನೀಡುವಾಗ ಆ ಅಂಕಪಟ್ಟಿಗಳನ್ನು ವಿಟಿಯು ಅಮಾನ್ಯ ಮಾಡಿದೆ.

Advertisements

ನಕಲಿ ಅಂಕಪಟ್ಟಿಗಳ ಹಿಂದೆ ದೊಡ್ಡ ಹಗರಣ ನಡೆದಿರುವ ಬಗ್ಗೆ ವಿಟಿಯು ಶಂಕೆ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ಮತ್ತು ಎನ್ಐಓಎಸ್‌ಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ರಮವೆಸಗಿದ ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್‌ ‌ಕೋಟಾದಡಿ ಬೆಂಗಳೂರಿನ ಪ್ರತಿಷ್ಠಿತ ‌ಇಂಜಿನಿಯರಿಂಗ್‌ ಕಾಲೇಜಿಗೆ ಪ್ರವೇಶ ಪಡೆದಿದ್ದರು. ವಿದ್ಯಾರ್ಥಿಗಳು ತುಮಕೂರು, ಚಿಕ್ಕಬಳ್ಳಾಪುರ ಮೂಲದವರೆಂಬ‌ ಮಾಹಿತಿ ಸಿಕ್ಕಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನೀಡಿದ ಪ್ರಮಾಣಪತ್ರಗಳು ನಕಲಿ ಎಂದು ಸಾಬೀತಾದ ಕಾರಣ, ಪ್ರವೇಶ ಪಡೆಯಲು ಅವಕಾಶ ನೀಡಿಲ್ಲ. ಇದಕ್ಕೂ ಮುನ್ನ ತಾಂತ್ರಿಕ ಶಿಕ್ಷಣ ಇಲಾಖೆ ಈ ಎಲ್ಲ ಅಂಕಪಟ್ಟಿಗಳನ್ನೂ ಮಾನ್ಯ ಮಾಡಿದೆ. ಆದರೆ, ವಿಟಿಯು ಕಾಲೇಜುವಾರು ಅನುಮೋದನೆ ನೀಡುವಾಗ ಅಮಾನ್ಯ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ವೇದಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ; ಎಐಡಿಎಸ್‌ಒ ಕಿಡಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X