ಸಿಇಟಿ : ದಾಖಲಾತಿ ತಿದ್ದುಪಡಿಗೆ ಮೇ 24ರವರೆಗೂ ಅವಕಾಶ

Date:

Advertisements

2023–24ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’ಗೆ (ಸಿಇಟಿ) ಅರ್ಜಿ ಹಾಕಿರುವವರು ಸಲ್ಲಿಸಿರುವ ದಾಖಲೆಗಳ ತಿದ್ದುಪಡಿಗೆ ಮೇ 24ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

ಪ್ರಸಕ್ತ ವರ್ಷ, ಸಿಇಟಿಗೆ ದಾಖಲೆ ಮಟ್ಟದಲ್ಲಿ 2.5 ಲಕ್ಷ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಪುನರಾವರ್ತಿತರೂ ಸೇರಿದಂತೆ ಈ ಬಾರಿ ಅತಿಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೇ 20 ರಿಂದ 22ರವರೆಗೆ ಸಿಇಟಿ ನಡೆಯಲಿದೆ ಎಂದು ಕೆಇಎ ಹೇಳಿದೆ.

ವಿದ್ಯಾರ್ಥಿಗಳು ತಮ್ಮ ಮೀಸಲಾತಿ, ವಾರ್ಷಿಕ ಆದಾಯ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ, ವಿಶೇಷ ವರ್ಗ ಮತ್ತಿತರ ಮಾಹಿತಿಗಳಲ್ಲಿ ತಪ್ಪುಗಳಿದ್ದರೆ ಸರಿಪಡಿಸಬಹುದು. ತಿದ್ದುಪಡಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಇಟ್ಟಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಸಲಹೆ ನೀಡಿದ್ದಾರೆ.

Advertisements

ಅಭ್ಯರ್ಥಿಯ ಹೆಸರು, ತಂದೆ- ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿಗಳ ಬದಲಾವಣೆಗೆ ಅವಕಾಶ ಇಲ್ಲ. ಇದರಲ್ಲೇನಾದರೂ ಬದಲಾವಣೆಗಳಿದ್ದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಂಪರ್ಕಿಸಬೇಕು. ಆದರೆ, ಸಿಬಿಎಸ್‌ಇ, ಸಿಐಎಸ್‌ಸಿಇ ಪಠ್ಯಕ್ರಮಗಳಲ್ಲಿ ಎಸ್ಸೆಸ್ಸೆಲ್ಸಿ ಓದಿರುವವರು ಈ ವಿವರಗಳನ್ನು ತಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ವಿವರ ನೀಡಿದ್ದಾರೆ.

ರಾಷ್ಟ್ರೀಯತೆಯನ್ನು ತಿದ್ದುಪಡಿ ಮಾಡಿಕೊಳ್ಳಲು ಬಯಸುವ ಸಾಗರೋತ್ತರ ಭಾರತೀಯ ಪ್ರಜೆ(ಒಸಿಐ) ಅಭ್ಯರ್ಥಿಗಳು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಹೆಸರಿನಲ್ಲಿ ನಿಗದಿತ ಮೊತ್ತದ ಡಿಮ್ಯಾಂಡ್‌ ಡ್ರಾಫ್ಟ್‌ ಪಡೆದುಕೊಂಡು, ಏ.13 ಮತ್ತು 15ರಂದು ನೇರವಾಗಿ ಪ್ರಾಧಿಕಾರದ ಕಚೇರಿಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ಕಲಿಕಾ ಚೇತರಿಕಾ’ ಕ್ರಮ; ಶೈಕ್ಷಣಿಕ ಕೌಶಲ್ಯಗಳಲ್ಲಿ ಸುಧಾರಣೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X