ಬಾಗಲಕೋಟೆ | ಮುಡಾ ಪ್ರಕರಣ; ನ.6ರಂದು ಅರೆಬೆತ್ತಲೆ ಮೆರವಣಿಗೆಗೆ ದಸಂಸ ಕರೆ

Date:

Advertisements

ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗಪಡಿಸಿಕೊಂಡು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸರ್ಕಾರ ದುರ್ಬಲಗೊಳಿಸಲು, ಚುನಾಯಿತ ಸರ್ಕಾರ ಪತನಗೊಳಿಸಲು ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿಯು ಬಾಗಲಕೋಟೆ ಜಿಲ್ಲಾ ನವನಗರದಲ್ಲಿ ನವೆಂಬರ್‌ 6ರಂದು ಬೆಳಿಗ್ಗೆ 11.30ಕ್ಕೆ ಅರೆಬೆತ್ತಲೆ ಮೆರವಣಿಗೆ ನಡೆಸಲಾಗುವುದು ಎಂದು ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನವನಗರದ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಲಾಗುತ್ತದೆ. ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು” ಎಂದರು.

“ಎಫ್‌ಐಆರ್ ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡ ನಿಗದಿಪಡಿಸಿದರೆ ಸಿದ್ದರಾಮಯ್ಯ ಮಾತ್ರವಲ್ಲ, ನರೇಂದ್ರ ಮೋದಿಯವರ ಸಂಪುಟದ 23ರಿಂದ 24 ಮಂದಿ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ, ರಾಜಭವನಗಳ ಮೂಲಕ ಮಟ್ಟಹಾಕಲು ಫ್ಯೂಡಲ್ ರಾಜಕಾರಣ ದೇಶದಲ್ಲಿ ನಡೆದಿದೆ. ಆದರೆ ಮುಡಾ ಪ್ರಕರಣ ಕೃತಕ ಕಾರಣಕ್ಕೆ ಹೆದರಿ ಸಿದ್ದರಾಮಯ್ಯನವರ ಸರ್ಕಾರ ನಿರ್ಗಮಿಸುವುದು ಎಂದರೆ ಈ ಸಮಾಜದ ಬಹುಜನರ ವಿಚಾರಧಾರೆಗೆ ಸೋಲಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮಂಗಳೂರು | ಮುಸ್ಲಿಂ ಯುವಕನ ದೀಪಾವಳಿ ಸಂಭ್ರಮ; ಗೂಡುದೀಪ ತಯಾರಿಸಿ ಹಂಚಿದ ಅಶ್ಫಾಕ್

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ, ರವಿ ಕಾಂಬಳಿ, ಕಾಶಿಂಜಲಿ ಗೋರೆ, ಮಹಾಲಿಂಗಪ್ಪ ಅಲಬಾಳ, ಸದಾಶಿವ ಐನಾಪೂರ, ಬಸವರಾಜ ದೊಡ್ಡಮನಿ, ಮಾರುತಿ ಚಿಕ್ಕಾಲಗುಂಡಿ, ಹುಲ್ಲಪ್ಪ ಅಂಟರಟಾನ, ಆಪಾಸಿ ಕಾಂಬಳೆ, ಶ್ರಾವಣ ನಿಡೋಣಿ, ಯಾಸಿನ್ ಲೋದಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X