ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಚೈನ್ ಸೇರಿದಂತೆ 65 ವಸ್ತುಗಳು ಪತ್ತೆ; ಶಸ್ತ್ರಚಿಕಿತ್ಸೆ ಮಾಡಿದರೂ ಬದುಕುಳಿಯದ ಬಾಲಕ

Date:

Advertisements

14 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಚೈನ್, ಸ್ಕ್ರೂ ಹಾಗೂ ರೇಜರ್ ಬ್ಲೇಡ್ ಸೇರಿದಂತೆ ಬರೋಬ್ಬರಿ 65 ವಸ್ತುಗಳು ಪತ್ತೆಯಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ಹೊರತೆಗೆಯಲಾಗಿದೆ. ಆದರೆ, ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಾತ್ರಾಸ್‌ ಜಿಲ್ಲೆಯಲ್ಲಿ ನಡೆದಿದೆ.

ಬಾಲಕನಿಗೆ ಸುಮಾರು ಐದು ಗಂಟೆಗಳ ಕಾಲ ಸುಧೀರ್ಘ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಹೊಟ್ಟೆಯಲ್ಲಿದ್ದ ಎಲ್ಲ ವಸ್ತುಗಳನ್ನು ಹೊರತೆಗೆಯಲಾಗಿದೆ. ಆದರೆ, ಕರುಳಿನ ಸೋಂಕಿನಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತ ಬಾಲಕನನ್ನು ಆದಿತ್ಯ ಶರ್ಮಾ ಎಂದು ಗುರುತಿಸಲಾಗಿದೆ. ಆತನಿಗೆ ಇತ್ತೀಚೆಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿತ್ತು. ಪರೀಕ್ಷೆ ವೇಳೆ ಆತನ ಹೊಟ್ಟೆಯಲ್ಲಿ ಹಲವು ವಸ್ತುಗಳು ಇರುವುದು ಪತ್ತೆಯಾಗಿತ್ತು. ಬಳಿಕ ಆತನಿಗೆ ಶಸ್ತ್ರಚಿಕಿತ್ಸೆಯನ್ನೂ ನಡೆಸಿ ಎಲ್ಲ ವಸ್ತುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಆದರೂ, ಬಾಲಕ ಬದುಕುಳಿಯಲಿಲ್ಲ.

Advertisements

ಬಾಲಕ ಈ ಹಿಂದೆ ಆ ವಸ್ತುಗಳನ್ನು ನುಂಗಿರುವ ಸಾಧ್ಯತೆ ಇದೆ ಎಂದು ವೈದ್ಯರು ಶಂಕಿಸಿದ್ದಾರೆ. ಬಾಲಕನ ತಂದೆ ಸಂಕೇತ್ ಶರ್ಮಾ ಅವರು ಔಷಧ ಕಂಪನಿಯ ಪ್ರತಿನಿಧಿಯಾಗಿದ್ದಾರೆ. ಅವರು ಹೇಳುವಂತೆ, “ಅಕ್ಟೋಬರ್ 13ರಿಂದ ಬಾಲಕನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆತನನ್ನು ಹಲವು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಅಕ್ಟೋಬರ್ 19ರಂದು ಜೈಪುರ ಆಸ್ಪತ್ರೆಯಲ್ಲಿ ಆತನನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ, ಆತನ ಹೊಟ್ಟೆಯಲ್ಲಿ ವಸ್ತುಗಳು ಇರುವುದು ಪತ್ತೆಯಾಗಿತ್ತು. ಬಳಿಕ, ಅಲೀಗಢ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ, ಮಗನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X