ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ; ಅಪಾರ ನಷ್ಟ, ಸಂಕಷ್ಟದಲ್ಲಿ ರೈತ

Date:

Advertisements
  • ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ
  • ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ, ಅಪಾರ ನಷ್ಟವಾಗಿದೆ.

ರೈತ ಈಶ್ವರಪ್ಪ ಬಡಿಗೇರ ಅವರ ಆರು ಎಕರೆ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಸ್ವತಃ ಬೆಂಕಿ ನಂದಿಸಲು ಪ್ರಯತ್ನಿಸಿದರು. ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದರು. ಅಗ್ನಿ ಶಾಮಕ ದಳದ ಸಿಬ್ಬಂದಿ ಬರುವವರೆಗೆ ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿಯಾಗಿದೆ.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಹೊಲದ ಬದುವಿಗೆ ಇರುವ ಟಿಸಿಯಿಂದ ಹೊಲದ ಮಧ್ಯ ಭಾಗದಲ್ಲೇ ತಂತಿಗಳು ಹಾದು ಹೋಗಿವೆ. ಕಬ್ಬಿನ ಪಡದ ಪ್ರತಿ ದಂಟು ಸುಮಾರು 40 ಗಣಿಕೆಯಷ್ಟು ಎತ್ತರಕ್ಕೆ ಬೆಳೆದಿದ್ದು, ವಿದ್ಯುತ್‌ ತಂತಿಗಳು ಜೋತು ಬಿದ್ದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ.

Advertisements

“ಸುತ್ತ ಮುತ್ತಲಿನ ಊರಿನಲ್ಲೇ ಈ ಪರಿ ಪ್ರಮಾಣದಲ್ಲಿ ಕಬ್ಬು ಬೆಳೆದಿಲ್ಲ. ದಾರಿ ಹೋಕರೆಲ್ಲ ಕಬ್ಬು ಬೆಳೆದಿದ್ದನ್ನು ನೋಡಿ ಬೆಳೆದರೆ ಹೀಗೆ ಬೇಳಿಬೇಕು ಎನ್ನುವ ಪ್ರಶಂಸೆಯ ಮಾತುಗಳನ್ನು ಹೇಳುತ್ತಿದ್ದರು. ಈಗ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಎಕರೆ ಒಂದಕ್ಕೆ ಕಬ್ಬಿಗೆ ₹3 ಲಕ್ಷ ನಷ್ಟ ಆಗುತ್ತದೆ. ಮೂರು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಸೋಮವಾರ ತಹಶೀಲ್ದಾರ್‌ ಸಾಹೇಬರು ಹೊಲ ಬಂದು ನೋಡುತ್ತೇನೆ ಎಂದಿದ್ದಾರೆ” ಎನ್ನುತ್ತಾರೆ ರೈತನ ಮಗ ಈರಣ್ಣ ಬಡಿಗೇರ.

“ಇದೇ ಮೊದಲ ಬಾರಿಗೆ ನಾವು ಕಬ್ಬು ಬೆಳೆದಿದ್ದು. ವಾರದ ಹಿಂದೆ ಎಲ್ಲ ಸಂಬಂಧಿಕರು ಸೇರಿ ಸಂಭ್ರಮದಿಂದ ಕಬ್ಬಿನ ಪಡಕ್ಕೆ ಪೂಜೆ ಮಾಡಿದ್ದೆವು. ಸುತ್ತಲಿನ ರೈತರು ಕಬ್ಬು ಬೆಳೆದ ಪರಿ ನೋಡಿ ಬಹಳ ಹರ್ಷ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು ಕಟಾವು ಮಾಡಬೇಕಿತ್ತು. ಇಷ್ಟರಲ್ಲಿ ಬೆಂಕಿ ಬಿದ್ದು ಕಬ್ಬಿನ ಪಡ ಸುಟ್ಟು ಹೋಗಿದೆ. ಗಂಗಾ ಕಲ್ಯಾಣ ಕೊಳವೆಬಾಯಿಯಲ್ಲಿ ನೀರು ಬರದೇ ಇದ್ದಿದ್ದರಿಂದ 3 ಲಕ್ಷ ರೂ. ಸಾಲ ಮಾಡಿ ಮತ್ತೆ ಎರಡು ಕೊಳವೆಬಾವಿ ಕೊರಿಸಿದ್ದೆ. 2 ಲಕ್ಷ ರೂ. ಸಾಲ ಮಾಡಿ ಆರು ಎಕರೆ ಕಬ್ಬು ಹಾಕಿದ್ದೆ. ಈಗ ಮೂರು ಎಕರೆ ಪಡ ಪೂರ್ತಿ ಸುಟ್ಟು ಹೋಗಿದೆ. ಸರ್ಕಾರ ನಮ್ಮ ಪಾಲಿಗೆ ನೆರವಾಗಬೇಕು. ಹೊಲದ ನಷ್ಟ ನೋಡಿ ಪರಿಹಾರ ಕಲ್ಪಿಸಿದರೆ ಸಾಲದ ಹೊರೆ ಕಡಿಮೆ ಆಗುತ್ತದೆ” ಎಂದು ಕಬ್ಬು ಬೆಳೆದ ರೈತ ಈಶ್ವರಪ್ಪ ಬಡಿಗೇರ ಕಣ್ಣೀರಿಟ್ಟು ಹೇಳಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X