ಯಾದಗಿರಿ | ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Date:

Advertisements

ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪ್‌ನ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ(35) ಎಂದು ತಿಳಿದುಬಂದಿದೆ. ಬೈಕಿನಲ್ಲಿ ತೆರಳುತ್ತಿದ್ದ ತಿಪ್ಪಣ್ಣನ ಮೇಲೆ ನಾಲ್ಕಾರು ಜನ ಸೇರಿ ಹಲ್ಲೆ ಮಾಡಿದ್ದಾರೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಕೊಲೆ 1 1

ಹಳೇ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರ ತನಿಖೆ ನಂತರವೇ ಸತ್ಯಾಂಶ ಬಯಲಾಗಲಿದೆ. ಘಟನಾ ಸ್ಥಳಕ್ಕೆ ಪಿಐ ಎಸ್‌ ಎಂ ಪಾಟೀಲ್ ಪೊಲೀಸ್‌ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ, ಅಪಾರ ನಷ್ಟ, ಸಂಕಷ್ಟದಲ್ಲಿ ರೈತ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಡಿಎಸ್‌ಪಿ ಭೇಟಿ ನೀಡಿ ಪರಿಶೀಲನೆಗೆ ಸೂಚಿಸಿದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊಲೆಯಾದ ತಿಪ್ಪಣ್ಣನ ಸಂಬಂಧಿಕರು ಸೇರಿದಂತೆ ಇತರರು ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ವರದಿ: ವಾಲೆಂಟಿಯರ್ – ಸುರೇಶ ರೆಡ್ಡಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X