ಡ್ರಗ್ಸ್ ನಿಯಂತ್ರಣಕ್ಕೆ ಸಮಾಜದ ಸಹಕಾರ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

Date:

Advertisements
  • ಡ್ರಗ್ಸ್ ನಿಯಂತ್ರಣಕ್ಕೆ ನೆರೆಯ ರಾಜ್ಯಗಳ ಸಹಕಾರ ಅಗತ್ಯ
  • ವಿದೇಶಿ ಪ್ರಜೆಗಳ ವಿಚಾರದಲ್ಲಿ ಕೇಂದ್ರದ ಸಹಕಾರ ಅನಿವಾರ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಗಂಭೀರ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ದಕ್ಷಿಣ ರಾಜ್ಯಗಳ ನಾರ್ಕೊಟಿಕ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾವು ಕರ್ನಾಟಕದಲ್ಲಿ ಡ್ರಗ್ಸ್ ನಿಯಂತ್ರಣದಲ್ಲಿ ಜಿರೊ ಟಾಲೆರನ್ಸ್ ಜಾರಿಗೊಳಿಸಿದ್ದೇವೆ ಎಂದರು.

ಡ್ರಗ್ಸ್ ನಿಯಂತ್ರಣಕ್ಕೆ ಸಮಾಜದ ಸಹಕಾರ ಮುಖ್ಯ. ಸಾಮಾನ್ಯವಾಗಿ ಕ್ರೈಮ್ ಲೀಡ್ಸ್ ದ ಲಾ ಎನ್ನಲಾಗುತ್ತಿತ್ತು. ಆದರೆ ಈಗ ಆ ಮಾತು ಬದಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಮಾರ್ಗದರ್ಶನದಲ್ಲಿ ಕಾನೂನು ಅಪರಾಧವನ್ನು ನಿಯಂತ್ರಿಸುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

Advertisements

ಈ ಮೊದಲು ಪ್ರತಿ ವರ್ಷ ವಾರ್ಷಿಕ 1000 ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಈಗ ವರ್ಷದಲ್ಲಿ ಐದು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಜನರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಅಲ್ಲದೆ ಬಹಳ ಕೇಸ್ ಗಳಲ್ಲಿ ಶಿಕ್ಷೆಗೆ ಒಳಪಡಿಸಿದ್ದೇವೆ. ರಾಜ್ಯದಲ್ಲಿ ಡ್ರಗ್ ನಿಯಂತ್ರಣಕ್ಕೆ ಗಂಭೀರ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಡ್ರಗ್ಸ್ ತಡೆ ವಿಚಾರದಲ್ಲಿ ನೆರೆಯ ತಮಿಳುನಾಡಿನ ಸಹಕಾರ ಕೋರಿದ ಸಿಎಂ, ಬೆಂಗಳೂರು ಅಂತಾರಾಷ್ಟ್ರೀಯ ನಗರ ಇದರಿಂದ ಕೇವಲ 60ಕಿ.ಮೀ. ಅಂತರದಲ್ಲಿ ತಮಿಳುನಾಡು ಗಡಿ ಇದೆ. ಹಾಗಾಗಿ ನಾರ್ಕೊಟೆಕ್ ವಿಚಾರದಲ್ಲಿ ನಮ್ಮ ನಡುವೆ ಸಹಕಾರ ಅತ್ಯಂತ ಮುಖ್ಯ ಎಂದರು.

ಇನ್ನು ಡ್ರಗ್ಸ್ ಪ್ರಕರಣ ದಾಖಲಿಸುವಾಗ ಸಾಕಷ್ಟು ಒತ್ತಡ ಎದುರಿಸಿದ್ದೇವೆ. ನಾವು ಎನ್ಡಿಪಿಎಸ್ ಕಾಯ್ದೆಯನ್ನು ಸರಳಗೊಳಿಸಿ ಹೆಚ್ಚಿನ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಡ್ರಗ್ಸ್ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿದೆ. ಹೊರ ದೇಶಗಳ ಪ್ರಜೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಹಕಾರವೂ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X