ಕೋಲಾರ | ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನದ ಕೊಡುಗೆ : ಎಂ.ಎಲ್.ಸಿ ಅನಿಲ್ ಕುಮಾರ್

Date:

Advertisements

ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ. ಆದರೆ ಎಲ್ಲಾ ಧರ್ಮಗಳಿಗಿಂತಲೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಹೇಳಿದರು.

ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಜ್ಜೆ ಗುರುತುಗಳನ್ನು ಅರಿತು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ. ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸಿದ್ದಾರೆ. ದೇಶ ಪ್ರಸ್ತುತ ಶಾಂತಿ ಸೌಹಾರ್ಧತೆಯಿಂದ ಮುನ್ನೆಡೆಯಲು ಭದ್ರ ತಳಪಾಯ ಹಾಕಿಕೊಟ್ಟಿರುವ ಸಂವಿಧಾನವೇ ಕಾರಣ ಎಂದರು.

ಅನಿಲ್‌ 2

ಮೀಸಲಾತಿಯೇ ಇಲ್ಲದ ಸಂದರ್ಭದಲ್ಲಿ ಯಾರೂ ಓದದಷ್ಟು ಪದವಿಗಳನ್ನು ಅಂಬೇಡ್ಕರ್‌ ಓದಿದ್ದಾರೆ. ಆದರೆ ಪ್ರಸ್ತುತ ಮೀಸಲಾತಿಯಿದ್ದು, ಸಾಕಷ್ಟು ಅವಕಾಶಗಳಿವೆ. ಆದರೂ ಶಿಕ್ಷಣಕ್ಕೆ ಅಧ್ಯತೆ ನೀಡುತ್ತಿಲ್ಲ. ಸಾರ್ವಜನಿಕರು ಶಿಕ್ಷಣದ ಮಹತ್ವವನ್ನರಿತು ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

Advertisements

ಸಾಹಿತಿ ಡಾ.ಕುಪ್ಪಹಳ್ಳಿ ಬೈರಪ್ಪ ಮಾತನಾಡಿ, ದೇಶದಲ್ಲಿ ಅಷ್ಟೇ ಅಲ್ಲದೇ ವಿದೇಶದಲ್ಲೂ ಸಹ ವರ್ಷದ 365 ದಿನವು ನೆನಪು ಮಾಡಿಕೊಳ್ಳುವ ಮಹಾನ್ ಚೇತನ ಅಂಬೇಡ್ಕರ್. ಎಲ್ಲಿ ಭ್ರಷ್ಟಾಚಾರ, ಅಸಮಾನತೆ, ಅನ್ಯಾಯ ಇದೆಯೋ, ಅಲ್ಲಿ ಸಂವಿಧಾನ ಪ್ರಸ್ತುತವೆನಿಸುತ್ತದೆ. ಅಂಬೇಡ್ಕರ್ ಆಶಯಗಳನ್ನು ಬಲಪಡಿಸಲು ಇಂತಹ ಪುತ್ಥಳಿಗಳ ಅನಾವರಣ ಹೆಚ್ಚಾಗಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ಹರೀಶ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಪಂ ಸಿಎ ಗಂಗಾಧರಯ್ಯ, ಮಾಜಿ ಗ್ರಾಪಂ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ವೆಂಕಟೇಶಪ್ಪ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಹೊನ್ನೇನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಾಥ್, ಗಣೇಶ್, ಜಯರಾಮ್, ಯಲ್ಲಮ್ಮ, ರೇಣುಕಮ್ಮ, ಶಿಲ್ಪಾ, ಸೌಂದರ್ಯ, ಅರುಣಾ, ಗೋವಿಂದರಾಜು, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X