ಬಾಗಲಕೋಟೆ | ಲೋಕಾಪುರ ಸವದತ್ತಿ ರೈಲುಮಾರ್ಗ ನಿರ್ಮಾಣಕ್ಕೆ ಆಗ್ರಹ

Date:

Advertisements

ಉತ್ತರ ಕರ್ನಾಟಕದಲ್ಲಿಯೇ ಶಕ್ತಿ ದೇವತೆ ಹಾಗೂ ಈ ಭಾಗದ ಭಕ್ತರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಲೋಕಾಪುರ-ಸವದತ್ತಿ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಉತ್ತರ ಕರ್ನಾಟಕದ ಜನರು ಈ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಕರ್ನಾಟಕ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ ಮನವಿ ಮಾಡಿದರು.

ಬಾಗಲಕೋಟೆ ನಗರದ ಚರಂತಿಮಠ ಸಮುದಾಯ ಭವನದಲ್ಲಿ ಲೋಕಾಪುರ-ರಾಮದುರ್ಗ-ಸವದತ್ತಿ ಯಲ್ಲಮ್ಮ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಹೋರಾಟ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

“ಬಾಗಲಕೋಟೆ-ಕುಡಚಿ ರೈಲು ಮಾರ್ಗ ನಿರ್ಮಾಣಕ್ಕಾಗಿ ಹೋರಾಟದ ಆಂದೋಲನವೇ ನಡೆದಿತ್ತು. ಇದಕ್ಕೆ ಜಿಲ್ಲೆಯ ಪ್ರತಿಯೊಬ್ಬರೂ ಬೆಂಬಲ ನೀಡಿ, ಹೋರಾಟದಲ್ಲಿ ಭಾಗಿಯಾಗಿದ್ದರು. ಕರ್ನಾಟಕದ ಅಭಿವೃದ್ಧಿಯ ಜೀವನಾಡಿಯಾಗಲಿದೆ. ಅದೇ ಮಾದರಿಯಲ್ಲಿ ಲೋಕಾಪುರ-ಧಾರವಾಡ ಮಾರ್ಗ ನಿರ್ಮಾಣ ಹೋರಾಟ ನಡೆಯಲಿದೆ” ಎಂದು ಹೇಳಿದರು.

Advertisements

“ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಭಾಗಕ್ಕೆ ಅನುಕೂಲ ಆಗಲಿರುವ ಈ ಮಾರ್ಗ ಅನುಷ್ಠಾನಗೊಂಡರೆ, ಉತ್ತರ ಕರ್ನಾಟಕ ಜಿಲ್ಲೆಯ ಜನ ಪಕ್ಷಾತೀತ, ಜಾತ್ಯತೀತವಾಗಿ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ವಕೀಲ ಜೆ ಜೆ ಕುಲಕರ್ಣಿ ಮಾತನಾಡಿ, “ಧಾರವಾಡದ ಹೈಕೋರ್ಟ್ ಪೀಠಕ್ಕೆ ತೆರಳಲು ವಕೀಲರು, ಜನರಿಗೆ, ಪ್ರವಾಸಿಗರಿಗೆ, ಈ ಮಾರ್ಗ ಬಹಳಷ್ಟು ಅನುಕೂಲವಾಗಲಿದೆ. ಮುಧೋಳ ತಾಲೂಕು ಕೈಗಾರಿಕೆಯ ನಾಡಾಗಿದೆ. ಸರಕು ಸಾಗಾಣಿಕೆಗೆ ರೈಲು ಅನುಕೂಲವಾಗಲಿದೆ. ಹಾಗಾಗಿ ರೈಲುಮಾರ್ಗ ಶೀಘ್ರ ಕಾರ್ಯರೂಪಕ್ಕೆ ಬಂದರೆ ರೈತರಿಗೆ ಸಹಕಾರಿಯಾಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬಹುರಾಷ್ಟ್ರೀಯ ಕಂಪನಿಗಳಿಂದ ಆಹಾರ ಸಾರ್ವಭೌಮತೆ ಕಸಿಯುವ ಹುನ್ನಾರ : ಸಿ. ಯತಿರಾಜು

ವಕೀಲ ರಾಜು ಮನ್ನಿಕೇರಿ ಮಾತನಾಡಿ, “ರಾಮದುರ್ಗ ಭಾಗದಲ್ಲಿ ಶಬರಿ ಕೊಳ, ಶಿರಸಂಗಿ ಕಾಳಮ್ಮ ದೇವಿ, ಶಿವನ ಮೂರ್ತಿ ಸೇರಿದಂತೆ ಇನ್ನೂ ಹಲವಾರು ಐತಿಹಾಸಿಕ ತಾಣಗಳಿದ್ದು, ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೈಲು ಮಾರ್ಗದಿಂದ ಅನುಕೂಲವಾಗುತ್ತದೆ” ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಧರ್ಮಂತಿ, ರಾಮದುರ್ಗದ ಹೋರಾಟಗಾರ ಅಭಿಷೇಕ ತಳ್ಳಿಕೇರಿ, ಗೈಬು ಜೈನುಖಾನ್, ಡಾ. ಯಾದವಾಡ, ದಾದಾಪೀರ ಕೆರೂರ, ಪ್ರೇಮಾ ರಾಠೋಡ, ರೇಣುಕಾ ನ್ಯಾಮಗೌಡರ, ಮಂಜುಳಾ ಭೂಸಾರೆ, ಮೈನುದ್ದಿನ ಖಾಜಿ, ಸುಭಾಸ್‌ಚಂದ್ರ ಘೋಡಕೆ, ಬಿಬಿಜಾನ ತಾಳಿಕೋಟಿ, ಎ ಆರ್ ಪಠಾಣ, ಡಿ ಎಫ್ ಹಾಜಿ ಮುಂತಾದವರು ದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X