ಮಹಾರಾಷ್ಟ್ರ | ಬಂಡಾಯ ಎದ್ದಿದ್ದ 40 ಮುಖಂಡರನ್ನು ಪಕ್ಷದಿಂದ ಹೊರದಬ್ಬಿದ ಬಿಜೆಪಿ

Date:

Advertisements

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣಕ್ಕಾಗಿ ಬಂಡಾಯ ಎದಿದ್ದ ಪಕ್ಷದ 40 ಮಂದಿ ಮುಖಂಡರು ಬಿಜೆಪಿ ಉಚ್ಚಾಟಿಸಿದೆ. 37 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 40 ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದಾರೆ.

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ರಾಜ್ಯದ ಇಟ್ಟು 288 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಶಿವಸೇನೆ (ಉದ್ಧವ್ ಬಣ) ಮತ್ತು ಎನ್‌ಸಿಪಿ (ಶರದ್ ಬಣ)ದ ಮಹಾವಿಕಾಸ್ ಅಘಾಡಿ ಹಾಗೂ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಬಣ)ದ ಮಹಾಯುತಿ ನಡುವೆ ಪೈಪೋಟಿ ನಡೆಯುತ್ತಿದೆ. ಎರಡೂ ಮೈತ್ರಿಕೂಟಗಳು ಮೈತ್ರಿಯೊಳಗೆ ಕ್ಷೇತ್ರ ಹಂಚಿಕೊಂಡು ಚುನಾವಣೆ ಎದುರಿಸುತ್ತಿವೆ. ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ.

ಅಭ್ಯರ್ಥಿಗಳ ಪಟ್ಟಿಗಳು ಘೋಷಣೆಯಾದ ಬೆನ್ನಲ್ಲೇ, ಎಲ್ಲ ಪಕ್ಷಗಳಲ್ಲಿಯೂ ಬಂಡಾಯದ ಕಾವು ಭುಗಿಲೆದ್ದಿದೆ. ಬಿಜೆಪಿಯೂ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರಾದ ಆಕಾಂಕ್ಷಿಗಳಿಂದ ಬಂಡಾಯ ಎದುರಿಸುತ್ತಿದೆ. ಬಂಡಾಯ ಶಮನ ಮಾಡಲಾಗದೆ, ಹಲವು ಕ್ಷೇತ್ರಗಳಲ್ಲಿ ಪಕ್ಷದ 40ಕ್ಕೂ ಹೆಚ್ಚು ಮುಖಂಡರನ್ನು ಉಚ್ಚಾಟಿಸಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X