ಜಾರ್ಖಂಡ್ | ಬಂಡಾಯವೆದ್ದ 30 ನಾಯಕರ ಉಚ್ಚಾಟಿಸಿದ ಬಿಜೆಪಿ

Date:

Advertisements

ಬಂಡಾಯವೆದ್ದ ನಾಯಕರುಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಪಕ್ಷದ ವಿರುದ್ಧವಾಗಿ ಹೇಳಿಕೆ ನೀಡಿದ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ 30 ಬಂಡಾಯ ನಾಯಕರುಗಳನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.

ಜಾರ್ಖಂಡ್ ರಾಜ್ಯ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಪ್ರದೀಪ್ ವರ್ಮಾ ಅವರು ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಹೊರಹಾಕಿದ್ದಾರೆ.

ಜಾರ್ಖಂಡ್‌ನಲ್ಲಿ ಬಿಜೆಪಿ ಘೋಷಿಸಿದ 35ಕ್ಕೂ ಅಧಿಕ ಅಭ್ಯರ್ಥಿಗಳು ಇತರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರಗೊಂಡವರಾಗಿದ್ದಾರೆ. ಇದು ಬಿಜೆಪಿ ನಾಯಕರಲ್ಲಿ ನಿರಾಶೆಗೆ ಕಾರಣವಾಗಿದೆ. ಇದರಿಂದಾಗಿ ಬಿಜೆಪಿಯಲ್ಲಿ ಹಲವು ನಾಯಕರುಗಳು ಬಂಡಾಯವೆದ್ದಿದ್ದಾರೆ.

Advertisements

ಇದನ್ನು ಓದಿದ್ದೀರಾ? ಜಾರ್ಖಂಡ್ ಜನತೆಗೆ 25 ಗ್ಯಾರಂಟಿಗಳನ್ನು ಘೋಷಿಸಿದ ಬಿಜೆಪಿ: ಇಲ್ಲಿ ಟೀಕೆ, ಅಲ್ಲಿ ಓಲೈಕೆ!

“ನಮಗೆ ಇರುವ ವಿಶ್ವಾಸಾರ್ಹತೆಯನ್ನು ಅನುಮಾನಿಸಲಾಗುತ್ತಿದೆ. ಆದ್ದರಿಂದ ಹಲವು ನಾಯಕರು ಬಿಜೆಪಿ ತೊರೆದು ಜೆಎಂಎಂ ಅಥವಾ ಕಾಂಗ್ರೆಸ್‌ಗೆ ಸೇರುವ ನಿರ್ಧಾರ ಮಾಡಿದ್ದಾರೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಬಿಜೆಪಿಯಲ್ಲಿ ಬಿಕ್ಕಟ್ಟು ಹೆಚ್ಚಾಗುತ್ತಿದ್ದಂತೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ರಾಂಚಿಗೆ ತೆರಳಿದ್ದಾರೆ. ಅತೃಪ್ತ ನಾಯಕರುಗಳ ಮನವೊಲಿಸುವ ಪ್ರಯತ್ನವನ್ನೂ ಮಾಡಿದ್ದಾರೆ. ಜೊತೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಿರಿಯ ನಾಯಕರು ಅತೃಪ್ತ ನಾಯಕರನ್ನು ಭೇಟಿ ಮಾಡಿದರು. ಇದೀಗ ಬಂಡಾಯ ನಾಯಕರುಗಳನ್ನು ಉಚ್ಚಾಟಿಸಿದೆ.

ಇನ್ನು ಜಾರ್ಖಂಡ್‌ನಲ್ಲಿ ಆಡಳಿತಾರೂಢ ಇಂಡಿಯಾ ಒಕ್ಕೂಟ ‘ಒಂದು ಮತ, ಏಳು ಗ್ಯಾರಂಟಿ’ ಎಂಬ ಏಳು ಗ್ಯಾರಂಟಿಗಳನ್ನು ಘೋಷಿಸಿದೆ. ಹಾಗೆಯೇ ಒಂದು ಮತ, ಏಳು ಗ್ಯಾರಂಟಿ ಸಮುದಾಯಕ್ಕೆ ಪ್ರತ್ಯೇಕ ಹಿಂದುಳಿದ ವರ್ಗ ಕಲ್ಯಾಣ ಸಚಿವಾಲಯದ ಭರವಸೆ ನೀಡಿದೆ. ಬುಡಕಟ್ಟು ಜನಾಂಗದವರನ್ನು ಓಲೈಸುವ ಪ್ರಯತ್ನದಲ್ಲಿದೆ.

ಇನ್ನೊಂದೆಡೆ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಬಂದಿರುವ ಬಿಜೆಪಿ ಜಾರ್ಖಂಡ್‌ನಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ. ಜೊತೆಗೆ ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X