ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ

Date:

Advertisements

ಕಳೆದ ಒಂದು ವರ್ಷದಲ್ಲಿ, ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಆರ್‌ಎನ್‌ಪಿ) 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, 2019ರ ಜನವರಿ ಮತ್ತು 2022ರ ಜನವರಿ ನಡುವೆ ಇದೇ ಉದ್ಯಾನವನದಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ತನಿಖೆ ನಡೆಸಲು ವನ್ಯಜೀವಿ ಇಲಾಖೆಯು ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಎರಡು ತಿಂಗಳೊಳಗೆ ವರದಿ ನೀಡುವಂತೆ ಇಲಾಖೆ ಸೂಚಿಸಿದೆ. ಸಮಿತಿಯು ಉದ್ಯಾನವನದ ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸಲು ಮುಂದಾಗಿದೆ. ಹುಲಿಗಳ ನಾಪತ್ತೆಯಲ್ಲಿ ಉದ್ಯಾನವನದ ಅಧಿಕಾರಿಗಳು ಲೋಪ ಎಸಗಿರುವುದು ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡಲಿದೆ.

ಗಮನಾರ್ಹವಾಗಿ, ಕೆಳದ ಒಂದು ವರ್ಷದಲ್ಲಿ ನಾಪತ್ತೆಯಾದ 25 ಹುಲಿಗಳ ಪೈಕಿ, 2024ರ ಮೇ 17ರಿಂದ ಸೆಪ್ಟೆಂಬರ್ 30ರ ನಡುವೆ 14 ಹುಲಿಗಳು ನಾಪತ್ತೆಯಾಗಿವೆ.

ಈ ವರದಿ ಓದಿದ್ದೀರಾ?: ಸಾವಯವ ಕೃಷಿ | ರೈತರಿಗೆ ಲಾಭ – ಗ್ರಾಹಕರಿಗೆ ಆರೋಗ್ಯ; ಆದರೂ ಹಿಂದುಳಿದ ಕರ್ನಾಟಕ!

ಹುಲಿಗಳು ನಾಪತ್ತೆಯಾಗುತ್ತಿರುವ ಬಗ್ಗೆ ಉದ್ಯಾನವನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.

“ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ. ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ ಎಂಬುದು ವರದಿಯಲ್ಲಿ ಕಂಡುಬಂದಿದೆ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Download Eedina App Android / iOS

X