ಪುದುಚೇರಿ | ಆಟೋ ಚಾಲಕ, ಪ್ರವಾಸಿಗರಿಂದ 16ರ ಬಾಲಕಿಯ ಸಾಮೂಹಿಕ ಅತ್ಯಾಚಾರ

Date:

Advertisements

ದೀಪಾವಳಿಗಾಗಿ ಪುದುಚೇರಿಯಲ್ಲಿರುವ ತಮ್ಮ ಕುಟುಂಬಸ್ಥರ ಮನೆಗೆ ಹೋಗಲು ಹೊರಟಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಪುದುಚೇರಿಯ ಕಡಲತೀರದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೊದಲು ಆಟೋ ಚಾಲಕ ಅತ್ಯಾಚಾರ ಎಸಗಿದ್ದು ಬಳಿಕ ಪ್ರವಾಸಿಗರ ಗುಂಪೊಂದು ಅತ್ಯಾಚಾರ ಎಸಗಿದೆ ಎಂದು ಬಾಲಕಿ ಹೇಳಿದ್ದಾಳೆ.

ಪುದುಚೇರಿಯ ಕಡಲತೀರದಲ್ಲಿ ಪತ್ತೆಯಾದ ಬಾಲಕಿಯನ್ನು ಜಿಪ್ಮರ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ವೈದ್ಯಕೀಯ ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

Advertisements

ಇದನ್ನು ಓದಿದ್ದೀರಾ? ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ದುರುಳರು

ಮನೆಯಲ್ಲಿ ಸಣ್ಣ ಜಗಳ ನಡೆದು ಮನೆಯಿಂದ ಹೊರನಡೆದ ಬಾಲಕಿ ಪುದುಚೇರಿಗೆ ತನ್ನ ಕುಟುಂಬಸ್ಥರ ಮನೆಗೆ ದೀಪಾವಳಿ ಆಚರಿಸಲೆಂದು ಹೊರಟಿದ್ದಳು. ಆದರೆ ನಾಪತ್ತೆಯಾದ ಕಾರಣ ಆಕೆಯ ತಾಯಿ ಅಕ್ಟೋಬರ್ 31ರಂದು ಪ್ರಕರಣ ದಾಖಲಿಸಿದ್ದರು. ಇದಾದ ಎರಡು ದಿನಗಳ ಬಳಿಕ ಬಾಲಕಿ ಪತ್ತೆಯಾಗಿದ್ದಾಳೆ.

ಪೊಲೀಸರು ತನಿಖೆ ನಡೆಸಿ ಸಿಸಿಟಿವಿ ಪರಿಶೀಲಿಸಿದಾಗ ಬಾಲಕಿ ಕಾಜಾ ಮೊಹಿದೀನ್ ಎಂಬ ವ್ಯಕ್ತಿಯ ಆಟೋ ರಿಕ್ಷಾವನ್ನು ಹತ್ತಿರುವುದು ಕಂಡುಬಂದಿದೆ. ಆಕೆ ಹೇಳಿದ ಸ್ಥಳಕ್ಕೆ ಕರೆದೊಯ್ಯುವ ಬದಲು ಆಟೋ ಚಾಲಕ ಅತಿಥಿ ಗೃಹವೊಂದಕ್ಕೆ ಕರೆದೊಯ್ದಿದ್ದಾನೆ. ಅಲ್ಲಿಂದ ಬಳಿಕ ಆತನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯನ್ನು ಆರೋವಿಲ್ಲೆಯಲ್ಲಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ; ಪತಿಯನ್ನು ಮರಕ್ಕೆ ಕಟ್ಟಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

ಅದಾದ ಬಳಿಕ ಪ್ರವಾಸಿ ಟೆಕ್ಕಿಗಳಿದ್ದ ಕಾರನ್ನು ನಿಲ್ಲಿಸಿ ಬಾಲಕಿ ಲಿಫ್ಟ್ ಕೇಳಿದ್ದಾಳೆ. ಪ್ರವಾಸಿಗರು ಆಕಯನ್ನು ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಎರಡು ದಿನಗಳ ಕಾಲ ಅದೇ ಕೊಠಡಿಯಲ್ಲಿ ಇರಿಸಿಕೊಂಡಿದ್ದಾರೆ. ಎರಡು ದಿನಗಳ ನಂತರ ಕ್ಯಾಬ್ ಬುಕ್ ಮಾಡಿ ಆಕೆಯನ್ನು ಪುದುಚೇರಿಗೆ ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಗ್ರ್ಯಾಂಡ್ ಬಜಾರ್ ಪೊಲೀಸರು ಆಂಧ್ರಪ್ರದೇಶದ ಓರ್ವ ಟೆಕ್ಕಿ, ಒಡಿಶಾದ ಇಬ್ಬರು ಟೆಕ್ಕಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X