ಬೀದರ್‌ | ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ಹಾನಿ; ಕಂಗಾಲಾದ ರೈತರು

Date:

Advertisements

ಈರುಳ್ಳಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಯೋಜಿಸುತ್ತಿದ್ದರು. ಆ ವೇಳೆಗೆ ಅಕಾಲಿಕ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳಿದಿದ್ದ ರೈತರು ಕಂಗಾಲಾಗಿದ್ದಾರೆ.

ಬೀದರ್‌ ಜಿಲ್ಲೆ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಈರುಳ್ಳಿ ಬೆಳೆದು ಖುಷಿಯಲ್ಲಿದ್ದ ರೈತರು ಅಕಾಲಿಕ ಮಳೆಯಿಂದ ಕಣ್ಣೀರು ಹಾಕುತ್ತಿದ್ದಾರೆ. ಗ್ರಾಮದ ಅನೇಕ ರೈತರು ಬೆಳೆದ ಈರುಳ್ಳಿ ಮಳೆಯಲ್ಲಿ ತೋಯ್ದುಹೋಗಿದ್ದು, ಅದನ್ನು ತೆಗೆಯಲು ಈಗ  ಹರಸಾಹಸ ಪಡಬೇಕಾಗುತ್ತಿದೆ. ಕೈ ಸೇರಬೇಕಿದ್ದ ಬೆಳೆ ನೀರಿನಲ್ಲಿ ಕೊಳೆಯುತ್ತಿದೆ.

“ಅಕಾಲಿಕ ಮಳೆಯಿಂದ ಈರುಳ್ಳಿ ಬೆಳೆ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ನಮ್ಮ ಬದುಕು ಬೀದಿಪಾಲಾಗುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸೂಕ್ತ ಪರಿಹಾರ ನೀಡಲು ಮುಂದಾಗಬೇಕು” ಎಂದು ರೈತರು ಆಗ್ರಹಿಸಿದ್ದಾರೆ.

Advertisements
ಜಲಾವೃತವಾದ ಈರುಳ್ಳಿ
ಜಲಾವೃತವಾಗಿರುವ ಈರುಳ್ಳಿ ಬೆಳೆ

“ಔರಾದ ತಾಲೂಕಿನ ಬಹುತೇಕ ಗ್ರಾಮಗಳ ಈರುಳ್ಳಿ ಬೆಳೆಗಾರರ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ‌ಹೀಗಾಗಿ ಮಳೆ ಅವಾತರದಿಂದ ಸಂಕಷ್ಟ ಎದುರಾಗಿರುವ ರೈತರಿಗೆ ಪರಿಹಾರ ಒದಗಿಸುವುದು ಅನಿವಾರ್ಯವಾಗಿದೆ” ಎಂದು ಅವಲತ್ತುಕೊಂಡರು.

ಈ ಸುದ್ದಿ ಓದಿದ್ದೀರಾ? ಜಲ್ಲಿಕಟ್ಟು, ಕಂಬಳಕ್ಕೆ ಅವಕಾಶ ನೀಡುವ ಕಾನೂನನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

“ಸಾಲ ಸೋಲ ಮಾಡಿ ಈರುಳ್ಳಿ ಬೆಳೆದಿದ್ದ ಬೆಳಗಾರರಿಗೆ ಭಾರೀ ಮಳೆಯಿಂದ ನಷ್ಟ ಉಂಟಾಗಿದೆ. ಕಳೆದ ಕೆಲದಿನಗಳಿಂದ ಮಳೆ ಅಬ್ಬರಿಸಿದ್ದು, ಜಮೀನುಗಳು ಜಲಾವೃತವಾಗಿವೆ. ಇದರಿಂದಾಗಿ ಈರುಳ್ಳಿ ಗಡ್ಡೆಗಳು ಸಂಪೂರ್ಣವಾಗಿ ಹಾಳಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ” ಎಂದರು.

“ಮೂರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದು ಈ ವರ್ಷ ಉತ್ತಮ ಇಳುವರಿ ಬಂದಿತ್ತು. ವಾರದಿಂದ ಬಿಡುವಿಲ್ಲದೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ನೀರುಪಾಲಾಗಿ ಕೊಳೆಯುತ್ತಿದೆ. ಇದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ.‌ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕು” ಎಂದು ಈರುಳ್ಳಿ ಬೆಳೆಗಾರ ಖಂಡೆರಾವ ಪಾಟೀಲ ಕೊಳ್ಳೂರ ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X