ಸಿದ್ದರಾಮಯ್ಯರಿಂದ ಹಿಂದಿನಂತೆ ಈಗ ರಾಜ್ಯಕ್ಕೆ ಒಳಿತಾಗುವ ವಿಶ್ವಾಸವಿಲ್ಲ: ಕೇಂದ್ರ ಸಚಿವ ಸೋಮಣ್ಣ

Date:

Advertisements

ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಅದು ತನ್ನದೆಯಾದ ಕೆಲಸ ಮಾಡುತ್ತದೆ. ಆದರೆ ಹಿಂದಿನ ಸಿದ್ದರಾಮಯ್ಯ ಈಗ ಉಳಿದಿಲ್ಲ. ಅವರಿಂದ ರಾಜ್ಯಕ್ಕೆ ಒಳಿತಾಗಲಿದೆ ಎಂಬ ವಿಶ್ವಾಸ ಇಲ್ಲ ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಉಪಚುನಾವಣೆಯಲ್ಲಿ ಸರ್ಕಾರದ ಆಟಾಟೋಪ ನಡೆಯಲ್ಲ. ಜನ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

ವಕ್ಸ್ ಸಚಿವ ಜಮೀರ ಅಹ್ಮದರು ರಾಜ್ಯಕ್ಕೆ ಜೆಪಿಸಿ ತಂಡ ಆಗಮಿಸುತ್ತಿರುವುದೇ ಅನಧಿಕೃತ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, “ಮೊದಲು ಅವರು ಕಾನೂನು ಅರಿತುಕೊಳ್ಳಲಿ. ಈ ರೀತಿಯಾಗಿ ಏಕೆ ಹೇಳಿಕೆ ಕೊಟ್ಟರೋ ಗೊತ್ತಾಗುತ್ತಿಲ್ಲ. ಅವರಿಗೆ ಮುಸ್ಲಿಮರು ಮಾತ್ರ ಮತ ಹಾಕಿಲ್ಲ. ಎಲ್ಲರೂ ಹಾಕಿದ್ದಾರೆ. ಅವರು ಮೊದಲು ಮಂತ್ರಿ ಕೆಲಸ ಮಾಡಲಿ” ಎಂದು ಹರಿಹಾಯ್ದರು.

Advertisements

ವಕ್ಫ್‌ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ

“ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಇದ್ದು ಸತ್ತ ಹಾಗೆ ಸಿದ್ದರಾಮಯ್ಯ ಸರ್ಕಾರವಾಗಿದೆ. ಅವರು ಪಂಜರದ ಗಿಳಿಯಾಗಿದ್ದಾರೆ. ಮೊದಲಿನ ಹಾಗೆ ಅವರು ಸಿಎಂ ಆಗಿ ಉಳಿದಿಲ್ಲ. ಸ್ವಇಚ್ಛೆಯಿಂದ ಒಂದೇ ಒಂದು ಸಣ್ಣ ಅಭಿವೃದ್ಧಿ ಕಾರ್ಯ ಮಾಡಲು ಆಗುತ್ತಿಲ್ಲ. ಹೀಗಾಗಿ ಉಪ ಚುನಾವಣೆ ನಂತರ ಈ ಸರ್ಕಾರ ಇರುತ್ತದೆ ಎಂಬ ನಂಬಿಕೆ ಇಲ್ಲ” ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದರು.

“ರಾಷ್ಟ್ರಕ್ಕೆ ಬಸವರಾಜ ಬೊಮ್ಮಾಯಿ ಅವಶ್ಯಕತೆಯಿದೆ ಎಂದು ಮೋದಿಯವರು ಅಪೇಕ್ಷೆ ಮೇರೆಗೆ ಅವರು ಸಂಸದರಾಗಿದ್ದು, ಅವರ ಮಗನನ್ನು ಶಿಗ್ಗಾಂವಿ ಕ್ಷೇತ್ರಕ್ಕೆ ನಿಲ್ಲಿಸಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಧಾನಿ ಮೋದಿಯವರು ಕೈಗೊಂಡ ಕಾರ್ಯಗಳು ಗೆಲುವಿಗೆ ಸಹಕಾರಿ ಆಗಲಿದೆ. ಮೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೇಂದ್ರ ಮಂತ್ರಿ ಮಾಡಿದವರಿಗೆ ಋಣ ತೀರಿಸಬೇಕಲ್ವಾ,,ವಚನ ಸಾಹಿತ್ಯವನ್ನು ತಿರುಚಿ ವಿವೇಕವಿಲ್ಲದ ಹೇಳಿಕೆ ಕೊಡುವವರಿಗೆ ತಿರುಗಿ ಉತ್ತರ ಕೊಡುವ ಬದ್ಧತೆ ಇಲ್ಲದ ಲಿಂಗಾಯತ,,, ಲಿಂಗಾಯತ ಅನ್ನುವುದು ಒಂದು ದಂಧೆ ಮಾಡಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X