ಮೇಘಾಲಯ | ಕುಲಪತಿಯಿಂದ ಅಧಿಕಾರ ದುರುಪಯೋಗ; ವಜಾಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

Date:

Advertisements

ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನಲ್ಲಿರುವ ಈಶಾನ್ಯ ಹಿಲ್ ವಿಶ್ವವಿದ್ಯಾಲಯದಲ್ಲಿ (ಎನ್‌ಇಎಚ್‌ಯು) ಉದ್ವಿಗ್ನತೆ ಮುಂದುವರೆದಿದೆ. ವಿಶ್ವವಿದ್ಯಾಲಯದ ಕುಲಪತಿ ಪ್ರಭಾ ಶಂಕರ್ ಶುಕ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನೂ ವಿದ್ಯಾರ್ಥಿಗಳು ಆರಂಭಿಸಿದ್ದಾರೆ.

ಎನ್‌ಇಎಚ್‌ಯುನ ಸ್ಟೂಡೆಂಟ್ಸ್ ಯೂನಿಯನ್ (NEHUSU) ಮತ್ತು ಖಾಸಿ ವಿದ್ಯಾರ್ಥಿ ಸಂಘ (KSU)  ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. “ಕುಲಪತಿ ಪ್ರಭಾ ಅವರು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದಾರೆ. ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ರಿಜಿಸ್ಟ್ರಾರ್ ಮತ್ತು ಡೆಪ್ಯುಟಿ ರಿಜಿಸ್ಟ್ರಾರ್ ಪದಚ್ಯುತಿಗೊಳಿಸಬೇಕು. ಪರಿಷ್ಕೃತ ಹಾಸ್ಟೆಲ್ ಶುಲ್ಕಗಳು, ಶುದ್ಧ ಕುಡಿಯುವ ನೀರು, ವೈ-ಫೈ ಹಾಗೂ ಆಂಬ್ಯುಲೆನ್ಸ್ ಸೇವೆಗಳು ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು” ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

“ನಮ್ಮ ವಿಶ್ವವಿದ್ಯಾನಿಲಯದ ಗುಣಮಟ್ಟ ಕುಸಿಯುತ್ತಿದೆ. ವಿಶ್ವವಿದ್ಯಾಲಯದಲ್ಲಿ ನ್ಯಾಯಸಮ್ಮತತೆ ಇರಬೇಕು. ಅಧಿಕಾರ ದುರುಪಯೋಗಕ್ಕೆ ಅವಕಾಶ ಕೊಡಬಾರದು. ಉಪಕುಲಪತಿಯನ್ನು ಹೊರಹಾಕಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಉಪಕುಲಪತಿಗಳು ತಮ್ಮ ಸ್ವಾರ್ಥಕ್ಕಾಗಿ ವಿಶ್ವವಿದ್ಯಾನಿಲಯವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತಮ್ಮ ತಾಳಕ್ಕೆ ತಕ್ಕಂತೆ ನಡೆದುಕೊಳ್ಳುವವರನ್ನು ರಿಜಿಸ್ಟಾರ್ ಮತ್ತು ಡೆಪ್ಯೂಟಿ ರಿಜಿಸ್ಟ್ರಾರ್ ಆಗಿ ನೇಮಿಸಿಕೊಂಡಿದ್ದಾರೆ. ಈ ಅಧಿಕಾರಿಗಳು ತಾವು ಮಾಡಬೇಕಾದ ಕೆಲಸಕ್ಕೆ ಸಂಪೂರ್ಣವಾಗಿ ಸಮರ್ಥರಲ್ಲ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

“ಕುಲಪತಿ, ರಿಜಿಸ್ಟಾರ್‌ ಓಂಕಾರ್ ಸಿಂಗ್ ಮತ್ತು ಡೆಪ್ಯೂಟಿ ರಿಜಿಸ್ಟಾರ್‌ ಅಮಿತ್ ಗುಪ್ತಾ ಅಧಿಕಾರದಿಂದ ಕೆಳಗಿಳಿಯುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಎನ್‌ಇಎಚ್‌ಯು ಬೋಧಕರ ಸಂಘ (NEHUTA) ಬೆಂಬಲ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X