ಸಲ್ಮಾನ್ ಬಳಿಕ ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ

Date:

Advertisements

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಈಗ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರಿಗೆ ರಾಯ್‌ಪುರದಿಂದ ಜೀವ ಬೆದರಿಕೆ ಬಂದಿದೆ. ಮುಂಬೈನ ಬಾಂದ್ರಾದ ಪೊಲೀಸ್ ಠಾಣೆಗೆ ನೇರವಾಗಿ ಬೆದರಿಕೆ ಕರೆ ಬಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್‌ಪುರದಿಂದ ಜೀವ ಬೆದರಿಕೆ ಕರೆ ಬಂದಿದೆ. ಅಲ್ಲಿಂದ ಫೈಝಾನ್ ಎಂಬ ಯುವಕ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದು, 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಸಕ್ರಿಯ ಫೋನ್ ಸಂಖ್ಯೆಯ ಮೂಲಕ ಫೈಝಾನ್ ಇರುವ ಸ್ಥಳವನ್ನು ಕೂಡಾ ಪತ್ತೆಹಚ್ಚಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಹಾವೇರಿಯಲ್ಲಿ ಆರೋಪಿ ಬಂಧನ

Advertisements

ಕಿಂಗ್‌ ಖಾನ್‌ನ ಪಠಾನ್ ಮತ್ತು ಜವಾನ್ ಸಿನಿಮಾ ಹಿಟ್ ಆದ ಬಳಿಕ ಅವರಿಗೆ ಕಳೆದ ಅಕ್ಟೋಬರ್‌ನಲ್ಲಿ ಕೊಲೆ ಬೆದರಿಕೆ ಬಂದಿದೆ. ಇದಾದ ಬೆನ್ನಲ್ಲೇ ಮುಂಬೈ ಪೊಲೀಸರು ಶಾರುಖ್ ಭದ್ರತೆಯನ್ನು ಹೆಚ್ಚಿಸಿದರು. ಖಾನ್‌ಗೆ ವೈ+ ಭದ್ರತೆಯನ್ನು ನೀಡಲಾಗಿದೆ. ಈ ಭದ್ರತೆಯಡಿ ದಿನದ 24 ಗಂಟೆಯೂ ಕೂಡಾ ಆರು ಶಸ್ತ್ರಸಜ್ಜಿತ ಸಿಬ್ಬಂದಿಗಳು ಸುತ್ತಲಿ ಇರುತ್ತಾರೆ. ಇದಕ್ಕೂ ಮೊದಲು ಶಾರುಖ್ ಖಾನ್ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಹೊಂದಿದ್ದರು.

ಬಾಲಿವುಡ್‌ನ ಜನಪ್ರಿಯ ನಟ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದ ಬಳಿಕ ಇದೀಗ ಶಾರುಖ್ ಖಾನ್‌ಗೂ ಬೆದರಿಕೆ ಬಂದಿದೆ. ಈಗಾಗಲೇ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಗೆ ಸಂಬಂಧಿಸಿದಂತೆ 32 ವರ್ಷದ ರಾಜಸ್ಥಾನ ಮೂಲದ ಭೀಕಾರಾಂ ಜಲರಾಮ್ ಬಿಷ್ಣೋಯ್ ಯಾನೆ ವಿಕ್ರಮ್ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X