ಸರ್ಕಾರದ ನೋಟಿಸ್‌ಗೆ ಬೆಲೆ ನೀಡಲ್ಲ, ಭೂ ಕಬಳಿಕೆ ವಿರುದ್ಧ ಹೋರಾಟ ನಿಲ್ಲದು: ಆರ್ ಅಶೋಕ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ನಾವು ಯಾವುದೇ ಬೆಲೆ ನೀಡಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ, ನಮ್ಮ ಹೋರಾಟ ನಿಲ್ಲದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಮಂಡ್ಯ ಜಿಲ್ಲೆಯ ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿದ ಆರ್‌ ಅಶೋಕ್, “ವಿಪಕ್ಷ ನಾಯಕನಾಗಿ ಎಲ್ಲಿ ಬೇಕಾದರೂ ಓಡಾಡುವ ಅಧಿಕಾರ ನನಗಿದೆ. ಅದಕ್ಕಾಗಿ ವಕ್ಫ್‌ ಭೂಮಿ ಕಬಳಿಸಿದ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ” ಎಂದು ತಿಳಿಸಿದರು.

“ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ಶಾಲೆ ಕಣ್ಣ ಮುಂದೆ ಇದ್ದರೂ ಪಹಣಿಯಲ್ಲಿ ಖಬರಸ್ಥಾನ ಎಂದಿದೆ. ಇದು ಹೆಣ ಹೂಳುವ ಜಾಗವೇ ಎಂಬುದನ್ನು ಗ್ರಾಮಸ್ಥರೇ ಹೇಳಬೇಕು. ನಮ್ಮ ಶಾಲೆ ನಮ್ಮ ಹಕ್ಕು ಎಂಬ ಘೋಷಣೆಯಡಿ ಹೋರಾಟ ನಡೆಸಬೇಕು” ಎಂದು ಕರೆ ನೀಡಿದರು.

Advertisements

ಇದನ್ನು ಓದಿದ್ದೀರಾ? ವಿಪಕ್ಷ ನಾಯಕ ಆರ್ ಅಶೋಕ್ ಅವರ ಭೂ ವಂಚನೆ ಹಗರಣ ಬಿಚ್ಚಿಟ್ಟ ಕಾಂಗ್ರೆಸ್‌ ಸಚಿವರು

“ಯಾವುದೇ ಜಮೀನಿನ ತಕರಾರು ಇದ್ದರೂ ಜಿಲ್ಲಾಧಿಕಾರಿಗೆ ಅರ್ಜಿ ನೀಡಬೇಕು. ಆದರೆ ವಕ್ಫ್‌ಗೆ ಸಂಬಂಧಿಸಿದ ಜಮೀನು ವಿವಾದ ಬಂದರೆ ಅದನ್ನು ವಕ್ಫ್‌ನಲ್ಲೇ ಬಗೆಹರಿಸಬೇಕೆಂದು ಈ ಹಿಂದೆ ಕೇಂದ್ರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ. ಇದರಿಂದಾಗಿ ಜನರ ಜಮೀನು ಕಬಳಿಕೆಯಾಗುತ್ತಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಆಸ್ತಿ ಮುಜರಾಯಿ ಇಲಾಖೆಯಡಿ ಬಂದು ಸರ್ಕಾರಿ ಆಸ್ತಿಯಾಗುತ್ತದೆ. ಆದರೆ ಮುಸ್ಲಿಂ ಸಂಸ್ಥೆಗಳ ಆಸ್ತಿ ಮಾತ್ರ ವಕ್ಫ್‌ ಅಡಿ ಬರುತ್ತದೆ” ಎಂದು ದೂರಿದರು.

“ರಾಜ್ಯದ ಪ್ರತಿಯೊಬ್ಬರೂ ಪಹಣಿಯಲ್ಲಿ ಪರಿಶೀಲಿಸಬೇಕು. ಅದರಲ್ಲಿ ವಕ್ಫ್‌ ಎಂದು ಇದ್ದರೆ, ನನಗೆ ತಿಳಿಸಿದರೆ ಬಂದು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದರು.

ಇದೇ ವೇಳೆ ಮಹದೇವಪುರದ ಚಿಕ್ಕಮ್ಮ ದೇವಸ್ಥಾನಕ್ಕೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು. “ನಮ್ಮ ಶಾಲೆ ನಮ್ಮ ಹಕ್ಕು, ನಮ್ಮ ದೇವಸ್ಥಾನ ನಮ್ಮ ಹಕ್ಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಭೂ ಕಬಳಿಕೆಯ ಕ್ಯಾನ್ಸರ್‌ ತಡೆಗಟ್ಟದಿದ್ದರೆ ರೈತರು, ದಲಿತರ ಜಮೀನು ಉಳಿಯುವುದಿಲ್ಲ. ಸ್ವಾತಂತ್ರ್ಯ ಚಳವಳಿ ಮಾಡಿದಂತೆಯೇ ಈಗ ನಾವು ಹೋರಾಟ ಮಾಡಿ ವಕ್ಫ್‌ ಬೋರ್ಡ್‌ ರದ್ದು ಮಾಡಬೇಕಿದೆ” ಎಂದು ಸುದ್ದಿಗಾರರಿಗೆ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X