ಕೃಷಿ ತ್ಯಾಜ್ಯವನ್ನು ಸುಡುವ ರೈತರಿಗೆ ಗರಿಷ್ಠ 30 ಸಾವಿರ ರೂ. ದಂಡ; ಕೇಂದ್ರ ಸರ್ಕಾರ ಆದೇಶ

Date:

Advertisements

ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚುವ ರೈತರಿಗೆ ವಿಧಿಸಲಾಗುವ ದಂಡವನ್ನು ಕೇಂದ್ರ ಸರ್ಕಾರ ದ್ವಿಗುಣಗೊಳಿಸಿದೆ. ಈ ಹಿಂದೆ, ಕೃಷಿ ತ್ಯಾಚ್ಯಗಳನ್ನು ಸುಡುವ ರೈತರಿಗೆ ಗರಿಷ್ಠ 15,000 ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ, 30,000 ರೂ.ಗೆ ಏರಿಕೆ ಮಾಡಿದೆ.

ದೆಹಲಿಯ ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಅಂತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. ದೆಹಲಿ ಮತ್ತು ಸುತ್ತಮುತ್ತ ಗಾಳಿ ಹೆಚ್ಚು ಮಾಲಿನ್ಯಗೊಳ್ಳಲು ರೈತರು ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹೆಚ್ಚುವುದೇ ಪ್ರಮುಖ ಕಾರಣವೆಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ, ದಂಡದ ಮೊತ್ತವನ್ನು ದ್ವಿಗುಣಗೊಳಿಸಿ ಗುರುವಾರ ಆದೇಶ ಹೊರಡಿಸಿದೆ.

ಕೃಷಿ ತ್ಯಾಜ್ಯಗಳನ್ನು ಸುಡುವ ರೈತರಿಗೆ ಪರಿಸರ ಪರಿಹಾರವೆಂದು ದಂಡ ವಿಧಿಸಲಾಗುತ್ತದೆ. ಕೇಂದ್ರದ ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರು 5,000 ರೂ. ದಂಡ ಪಾವತಿಸಬೇಕಾಗುತ್ತದೆ. ಎರಡು ಎಕರೆಯಿಂದ ಐದು 10 ಎಕರೆ ಜಮೀನು ಹೊಂದಿರುವ ರೈತರಿಗೆ 10,000 ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ, 10 ಎಕರೆಗಿಂತ ಹೆಚ್ಚು ಭೂಮಿ ಹೊಂದಿದ್ದರೆ, ಅಂತಹ ರೈತರಿಗೆ 30,000 ರೂ. ದಂಡ ವಿಧಿಸಲಾಗುತ್ತದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X