ಬೆಂಗಳೂರು | 10 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ; ವಿಡಿಯೋ ಹಂಚಿಕೊಂಡ ವ್ಲಾಗರ್‌

Date:

Advertisements

ಬಿಟಿಎಂ ಲೇಔಟ್‌ನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ 10 ವರ್ಷದ ಬಾಲಕ ತನಗೆ ಕಿರುಕುಳ ನೀಡಿದ್ದಾನೆ ಎಂದು ಬೆಂಗಳೂರು ಮೂಲದ ಯೂಟ್ಯೂಬರ್ ಒಬ್ಬರು ಆರೋಪಿಸಿದ್ದಾರೆ. ಇದರ ವಿಡಿಯೋವನ್ನು ಕೂಡಾ ಹಂಚಿಕೊಂಡಿದ್ದಾರೆ.

ಯೂಟ್ಯೂಬರ್ ನೇಹಾ ಬಿಸ್ವಾಲ್ ಕೆಲಸದಿಂದ ಹಿಂತಿರುಗುವಾಗ ವಿಡಿಯೋ ಬ್ಲಾಗ್ ಅನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ಬೈಸಿಕಲ್‌ನಲ್ಲಿ ಸಾಗುತ್ತಿದ್ದ ಬಾಲಕ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ಎಸಗಿದ್ದಾನೆ.

ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಂಗಳೂರು ಪೊಲೀಸರು ವಿಡಿಯೋದ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಿಕೃತ ಕಾಮಿ; ಆಸ್ಪತ್ರೆ ವಾರ್ಡ್​ ಬಾಯ್ ಬಂಧನ

ಬಿಟಿಎಂ ಲೇಔಟ್‌ನಲ್ಲಿ ಪಿಜಿಯಲ್ಲಿರುವ ಬಿಸ್ವಾಲ್ ಈ ಘಟನೆಯ ಬಳಿಕ ಆಘಾತಕ್ಕೆ ಒಳಗಾಗಿದ್ದು ಅತ್ತು ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

“ಈ ರೀತಿ ನನಗೆ ಎಂದಿಗೂ ಸಂಭವಿಸಿಲ್ಲ. ನಾನು ನಿಜವಾಗಿಯೂ ತುಂಬಾ ದುಖಃವಾಗಿದೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಿದ್ದೆ. ಆ ಈ ಹುಡುಗ ಆರಂಭದಲ್ಲಿ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ. ಬಳಿಕ ಯು-ಟರ್ನ್ ಮಾಡಿ ನನ್ನ ಕಡೆಗೆ ಬಂದು, ನನ್ನ ಗೇಲಿ ಮಾಡಿದ. ಬಳಿಕ ನನಗೆ ಲೈಂಗಿಕ ಕಿರುಕುಳ ನೀಡಿದ” ಎಂದು ಬಿಸ್ವಾಲ್ ಹೇಳಿದ್ದಾರೆ.

“ಮೊದಲು ನನ್ನನ್ನು ಗೇಲಿ ಮಾಡಿದನು. ಬಳಿಕ ಕ್ಯಾಮೆರಾದಲ್ಲಿ ಹೇಗೆ ಮಾತನಾಡುತ್ತಿದ್ದೇನೆ ಎಂದು ಅನುಕರಿಸಿದರು. ಅದಾದ ಬಳಿಕ ನನಗೆ ಕಿರುಕುಳ ನೀಡಿದನು” ಎಂದು ಯುವತಿ ಆರೋಪಿಸಿದ್ದಾರೆ.

ಬಾಲಕನು ಓಡಿಹೋಗಲು ಪ್ರಯತ್ನಿಸಿದ್ದು, ಸಹಾಯಕ್ಕಾಗಿ ಕೂಗಿದ ನಂತರ ಸ್ಥಳೀಯ ಜನರು ಹಿಡಿದಿದ್ದಾರೆ. ಘಟನೆಯ ವಿಡಿಯೋವನ್ನು ತೋರಿಸಿದ ನಂತರವೇ ಜನರು ಆಕೆಯನ್ನು ನಂಬಿದ್ದಾರೆ ಎಂದು ಬಿಸ್ವಾಲ್ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X