ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 2024- 25 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಓಟಗಾರ್ತಿ ,ಏಕಲವ್ಯ ಮತ್ತು ದಸರಾ ಪ್ರಶಸ್ತಿ ಪುರಸ್ಕೃತೆ ಹಾಗೂ ಈಗ ಭಾರತೀಯ ಜೀವ ವಿಮಾ ನಿಗಮದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಸಿಲ್ವಿನ ಪಾಯಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.

1002292524

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಹೇಮಲತ ಬಿ.ಡಿ ಪ್ರಾಸ್ತಾವಿಕ ಮಾತುಗಳನ್ನಾಡುವ ಮೂಲಕ ಅತಿಥಿ ಪರಿಚಯವನ್ನು ಮಾಡಿದರು.

Advertisements

ಜಮಾತೆ ಇಸ್ಲಾಮಿ ಹಿಂದ್ ವಿಟ್ಲ ಮಹಿಳಾ ವಿಭಾಗ ‘ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಅಭಿಯಾನದ ಪ್ರಯುಕ್ತ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಇದೇ ವೇಳೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕುಮಾರಿ ಸೆಮಿನಾರವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಬ್ದುಲ್ಲ ಚೆಂಡಾಡಿ ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ ಹೈದರ್ ಅಲಿ ನೀರ್ಕಜೆ, ಜೊತೆ ಕಾರ್ಯದರ್ಶಿ ಅಬ್ದುಲ್ಲಾ ಕುಂಞಿ, ಟ್ರಸ್ಟಿಗಳಾದ ಅಬ್ದುಲ್ ರೆಹಮಾನ್, ಆದಂ ಇಸ್ಮಾಯಿಲ್ ಉಪಸ್ಥಿತರಿದ್ದರು.

1002292525

ಕಾರ್ಯಕ್ರಮದಲ್ಲಿ ಅನುಗ್ರಹ ಮಹಿಳಾ ಕಾಲೇಜಿನ ಸಲಹಾ ಸಮಿತಿಯ ಕಾರ್ಯದರ್ಶಿ ಮತ್ತು ಸದಸ್ಯರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯವರು ಉಪಸಿತರಿದ್ದರು.

ಪ್ರಥಮ ಬಿಕಾಂ ವಿದ್ಯಾರ್ಥಿನಿ ಖತಿಜತ್ ಹಿಷ್ಮ ಕಿರಾತ್ ಪಠಿಸಿ, ಪ್ರಥಮ ಬಿ. ಎ ವಿದ್ಯಾರ್ಥಿನಿ ಫಾತಿಮ ಶಮಿಯ ಸ್ವಾಗತಿಸಿ, ದ್ವಿತೀಯ ವಿಜ್ಞಾನ ವಿಭಾಗದ ತಸ್ನೀಮ್ ವಂದಿಸಿ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಹ್ಲಾ ಹೈದರ್ ಕಾರ್ಯಕ್ರಮ ನಿರೂಪಿಸಿದರು.

1002292526
1002292530
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X