ಗದಗ | ಮಕ್ಕಳನ್ನು ನದಿಗೆ ತಳ್ಳಿ ನದಿಗೆ ಹಾರಿದ್ದ ತಂದೆ: ನಾಲ್ವರ ಮೃತದೇಹವೂ ಪತ್ತೆ; ಸಾಮೂಹಿಕ ಅಂತ್ಯಕ್ರಿಯೆ

Date:

Advertisements

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಜೆ ನದಿಗೆ ಹಾರಿದ್ದ ತಾಲೂಕಿನ ಮಕ್ಕುಂಪುರ ಗ್ರಾಮದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಗುರುವಾರ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಯಿತು.

ಬಾಲಕ ವೇದಾಂತ್ ಮೃತದೇಹ ಬುಧವಾರ ಸಂಜೆ ಪತ್ತೆಯಾಗಿತ್ತು. ಮಕ್ಕಳನ್ನು ನದಿಗೆ ತಳ್ಳಿ ತಾನೂ ನದಿಗೆ ಹಾರಿದ್ದ ಮಂಜುನಾಥ ಅರಕೇರಿ, ಅವರ ಮಕ್ಕಳಾದ ಧನ್ಯಾ ಹಾಗೂ ಪವನ್ ಅವರ ಮೃತದೇಹಗಳು ಗುರುವಾರ ಪತ್ತೆಯಾದವು. ಪಟ್ಟಣದ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳೀಯ ಮೀನುಗಾರರ ನೆರವಿನಿಂದ ಎರಡು ದಿನ ಶೋಧ ಕಾರ್ಯ ನಡೆಸಿದ್ದರು.

ಎಲ್ಲರ ಮೃತದೇಹಗಳನ್ನು ಮುಂಡರಗಿ ಸಾರ್ವಜನಿಕ ಆಸ್ಪತ್ರೆಗೆ ತಂದು ಶವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮೃತದೇಹಗಳು ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಕ್ಕಳ ಮೃತದೇಹ ಕಂಡು ಗ್ರಾಮಸ್ಥರು ಮರುಗಿದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಮುಖ್ಯ ಶಿಕ್ಷಕಿಯಿಂದ ದುರ್ವರ್ತನೆ ಆರೋಪ: ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಏನಿದು ಘಟನೆ?

ಕೌಟುಂಬಿಕ ಕಲಹದಿಂದ ಬೇಸತ್ತ ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ತನ್ನ ಮೂವರು ಮಕ್ಕಳೊಂದಿಗೆ ಕಳೆದ ಮಂಗಳವಾರ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿಯಲ್ಲಿ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಕ್ಕಳು 2

ಮಂಜುನಾಥ ಅವರು ಮೊದಲು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂರು ವರ್ಷದ ವೇದಾಂತ, ನಾಲ್ಕು ವರ್ಷದ ಪವನ್ ಹಾಗೂ ಆರು ವರ್ಷದ ಧನ್ಯಾ ನದಿ ಪಾಲಾದ ದುರ್ದೈವಿ ಮಕ್ಕಳು.

ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮುಂಡರಗಿ ಪೊಲೀಸರು ಪ್ರಕರನ ದಾಖಲಿಸಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X