66 ಶಾಲೆಗಳಿಗೆ ಈವರೆಗೂ ಮೊಟ್ಟೆಯೇ ವಿತರಣೆಯಾಗಿಲ್ಲ!

Date:

Advertisements

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯ ಅನುಷ್ಠಾನ ಕ್ರಮ ಕುರಿತು ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಇತ್ತೀಚೆಗೆ ಮೌಲ್ಯಮಾಪನ ನಡೆಸಿದ್ದು, 357 ಶಾಲೆಗಳಿಗೆ ಭೇಟಿ ನೀಡಿದಾಗ 66 ಶಾಲೆಗಳಿಗೆ ಈವರೆಗೂ ಮೊಟ್ಟೆಯೇ ವಿತರಣೆಯಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ.

ಪಿ.ಎಂ. ಪೋಷಣ್ ಯೋಜನೆ ಅಡಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ನಾಲ್ಕು ಸೇರಿ ವಾರಕ್ಕೆ ಆರು ಮೊಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ.

ಆದರೆ, ಶಾಲಾ ಮಕ್ಕಳಿಗೆ ವಾರಕ್ಕೆ ಆರು ದಿನ ಬೇಯಿಸಿದ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ 98 ಅಧಿಕಾರಿಗಳು ವಿಫಲರಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಈಗ ಆ ಅಧಿಕಾರಿಗಳಿಗೆ ನೋಟಿಸ್ ನೀಡಿದೆ.

Advertisements

ಫೌಂಡೇಷನ್ ಪ್ರತಿನಿಧಿಗಳು ಸಿದ್ದಪಡಿಸಿದ ಅಧ್ಯಯನ ವರದಿ ಆಧರಿಸಿ ಅನುಷ್ಠಾನದ ಹೊಣೆ ಸಮರ್ಪಕವಾಗಿ ನಿಭಾಯಿಸದ 50 ಬಿಇಒಗಳು ಹಾಗೂ ಪಿ.ಎಂ. ಪೋಷಣ್ ಅಭಿಯಾನದ 48 ಸಹಾಯಕ ನಿರ್ದೇಶಕರೂ ಸೇರಿ 98 ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್;‌ ಭವಿಷ್ಯದ‌ ಯುವ ಭಾರತಕ್ಕೂ ಮಾರಕ

ಅಜೀಂ ಪ್ರೇಮ್‌ಜಿ ಫೌಂಡೇಷನ್ ಮೊಟ್ಟೆ ವಿತರಣೆಗೆ ಕೈಜೋಡಿಸಿದ್ದು, ₹1,500 ಕೋಟಿ ನೆರವು ನೀಡಿದೆ. ಸೆ.25ರಿಂದ ಮೊಟ್ಟೆ ವಿತರಣೆ ಕಾರ್ಯಕ್ರಮ ಆರಂಭವಾಗಿದೆ. ಮೊಟ್ಟೆ ತಿನ್ನುವುದಿಲ್ಲ ಎಂದು ಬೇಡಿಕೆ ಸಲ್ಲಿಸುವ ಮಕ್ಕಳಿಗೆ ನಿಯಮದಂತೆ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿದೆ.

ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಈ ಬಗ್ಗೆ ಮಾತನಾಡಿದ್ದು, “ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಲು, ದೈಹಿಕ ಆರೋಗ್ಯದ ಬೆಳವಣಿಗೆಗೆ ಉತ್ತೇಜಿಸಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಆರಂಭಿಸಲಾಗಿದೆ. ಅಜೀಂ ಪ್ರೇಮ್‌ಜಿ ಫೌಂಡೇಷನ್ ನೆರವು ನೀಡುತ್ತಿದೆ. ಇಂತಹ ಮಹತ್ವಕಾಂಕ್ಷಿ ಯೋಜನೆ ಯಶಸ್ಸಿಗೆ ಶ್ರಮಿಸಬೇಕಾದ ಅಧಿಕಾರಿಗಳಿಂದ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ. ಅಂಥವರ ವಿರುದ್ದ ಶಿಸ್ತುಕ್ರಮ ಅನಿವಾರ್ಯ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X