ಕೋವಿಡ್​ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

Date:

Advertisements

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್​ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದೆ. ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ.

2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಸೋಂಕು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್​ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು. ಈಗ ಅಕ್ರಮದ ಸರಣಿ ಸಂಗತಿಗಳು ವರದಿಯಲ್ಲಿ ಒಂದೊಂದಾಗಿ ಬಯಲಾಗುತ್ತಿವೆ.

ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ನೇರವಾಗಿ ಖರೀದಿಸುವ ಕುರಿತು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕಿಟ್‌ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂಬುದು ಬಯಲಾಗಿದೆ. ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗದ ವರದಿಯಲ್ಲಿ ದಾಖಲೆ ಸಮೇತ ಶಿಫಾರಸು ಮಾಡಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X