ಬೆಂಗಳೂರು | ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

Date:

Advertisements

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ವತಿಯಿಂದ 2024-25ನೇ ಸಾಲಿನ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರಾದ ಡಾ.ಎ.ಆರ್.‌ ಗೋವಿಂದಸ್ವಾಮಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಪ್ರಶಸ್ತಿಗೆ ಬಂಜಾರ ಸಮುದಾಯದ ಲೇಖಕರು ಸ್ವತಃ ತಾವೇ ಬರೆದಿರುವ ಪ್ರಕಾರದಲ್ಲಿ ವರ್ಷದಲ್ಲಿ ಕನಿಷ್ಠ 03 ಶೀರ್ಷಿಕೆಗಳಾದರೂ ಪ್ರಕಟವಾಗಿದ್ದಲ್ಲಿ ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುವುದು. ಈ ಕೃತಿಗಳು 2022-23 (ಪ್ರಸಕ್ತ ಸಾಲಿಗೆ ಮಾತ್ರ ಸೀಮಿತವಾಗಿ)ರ  ಹಿಂದೆ ಮುದ್ರಣಗೊಂಡ ಕೃತಿಗಳು ಹಾಗೂ 2023-24ರ ಸಾಲಿನಲ್ಲಿ ಪ್ರಕಟವಾಗಿರಬೇಕು ಎಂದು ತಿಳಿಸಿದ್ದಾರೆ.
 
ಬಂಜಾರ ಸಮುದಾಯದ ಸಂಸ್ಕೃತಿ, ನುಡಿ, ಸಾಹಿತ್ಯ, ಕಲೆಗಳು,  ಕಲಾವಿದರು, ಸಾಂಸ್ಕೃತಿಕ ವೀರರು /ನಾಯಕರು ಹಾಗೂ ಸಾಧಕರು,  ಈ ವಿಷಯಗಳಿಗೆ  ಪೂರಕವಾಗಿರಬೇಕು. ಮತ್ತು ಬಂಜಾರ ಸಮುದಾಯದ ಲೇಖಕರು ಸ್ವತಃ ತಾವೇ ಬರೆದಿರುವ ಸೃಜನಶೀಲ, ಜನಪರ ಬರಹಗಳಾದ  ಕಥಾ ಸಂಕಲನ, ಕಾದಂಬರಿ, ಕವನ ಸಂಕಲನ, ಜೀವನ ಚರಿತ್ರೆ ಹಾಗೂ ಪ್ರಬಂಧ ಸಂಕಲನ  ಕುರಿತ ಪುಸ್ತಕಗಳನ್ನೂ  ಸಹ ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? 66 ಶಾಲೆಗಳಿಗೆ ಈವರೆಗೂ ಮೊಟ್ಟೆಯೇ ವಿತರಣೆಯಾಗಿಲ್ಲ!

Advertisements

ಆಸಕ್ತರು ತಾವು  ಪ್ರಕಟಿಸಿದ ಕೃತಿಯ 03 ಪ್ರತಿಗಳೊಂದಿಗೆ ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು2024ರ ನವೆಂಬರ್ 30ರ ಒಳಗಾಗಿ ಕಚೇರಿ ವೇಳೆಯಲ್ಲಿ ಅಕಾಡೆಮಿಗೆ ಖುದ್ದಾಗಿ ಸಲ್ಲಿಸಲು ಇಲ್ಲವೇ ಅಂಚೆ, ಕೋರಿಯರ್‌ ಮೂಲಕ ಕಳುಹಿಸಿಕೊಡಲು ತಿಳಿಸಿದ್ದಾರೆ.

ಕಳುಹಿಸಬೇಕಾದ ವಿಳಾಸ, ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು -560002. ಹೆಚ್ಚಿನ ಮಾಹಿತಿಗಾಗಿ : 080-29917745 ದೂರವಾಣಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X