ಸಾರ್ವಜನಿಕರಲ್ಲಿ ಗರ್ಭ ಕೊರಳ ಹಾಗೂ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಮ್ಮೇಳನದ ಅಂಗವಾಗಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ರಾಜ್ಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಮಹಾ ಸಮ್ಮೇಳನದ ಅಂಗವಾಗಿ ಬಹಳ ಕಾಮನ್ ಆಗಿರುವಂತಹ ಗರ್ಭ ಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ನಿಂದ ಹೆಚ್ಚು ಮಹಿಳೆಯರು ಸಾವಿಗೀಡಾಗುತ್ತಿದ್ದಾರೆ. ಪ್ರಾರಂಭದಲ್ಲಿ ಈ ಖಾಯಿಲೆಯನ್ನು ಗುರುತಿಸಿ ಚಿಕಿತ್ಸೆ ನೀಡಿದರೇ ಗುಣಮುಖರಾಗುತ್ತಾರೆ. ಜೊತೆಗೆ ಆಗುವ ಸಾವು ನೋವನ್ನು ತಪ್ಪಿಸಬಹುದು. ಈ ಬಗ್ಗೆ ಇನ್ನು ಅನೇಕರಲ್ಲಿ ತಿಳುವಳಿಕೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಈ ಬಗ್ಗೆ ಜಾಥದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ ತಿಳಿಸಿದರು.
ಈ ಬಗ್ಗೆ ಮಹಿಳೆಯರು ತಿಳಿದುಕೊಂಡು ಸಂಬಂಧಿಕರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ತಿಳಿಸುವುದರಿಂದ ಆರೋಗ್ಯ ಸಮಾಜ ನಿರ್ಮಾಣ ಮಾಡಬಹುದು. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ನೋವು, ಕೆಟ್ಟ ವಾಸನೆ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಂಡರೆ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.
ರಕ್ತ ಕ್ಯಾನ್ಸರ್ನಲ್ಲೂ ಕೂಡ ಹೆಚ್ಚು ಸಾವು ನೋವುಗಳು ಕಾಣುತ್ತಿದ್ದೇವೆ. ಚರ್ಮದಲ್ಲಿ ಸೊಂಕು, ಕಲರ್ ಬದಲಾವಣೆ, ಕೆಟ್ಟ ದ್ರವಗಳು ಹೊರ ಬರುತ್ತಿದ್ದರೇ ವೈದ್ಯರ ಬಳಿ ಸಲಹೆ ಪಡೆಯಬಹುದು ಎಂದು ಆರೋಗ್ಯಾಧಿಕಾರಿ ಸಲಹೆ ನೀಡಿದರು.
ಗರ್ಭ ಕಂಠದ ಕ್ಯಾನ್ಸರ್ ತಡೆಗಟ್ಟಲು ಪ್ರಾಥಮಿಕವಾಗಿ ಹೆಚ್.ಪಿ.ವಿ. ಸೋಂಕಿನಿಂದ ಉಂಟಾಗುತ್ತದೆ. ಈ ಸೋಂಕು ಸಾಮಾನ್ಯವಾಗಿದ್ದು, ಜೀವಿತಾವಧಿಯಲ್ಲಿ ಪ್ರತಿಯೊಬ್ಬರೂ ಹೆಚ್.ಪಿ.ವಿ. ಸೋಂಕಿಗೆ ಒಳಗಾಗುತ್ತಾರೆ. ಈ ಲಸಿಕೆ ಮೂಲಕ ಹೆಚ್.ಪಿ.ವಿ. ಸೋಂಕನ್ನು ತಡೆಯಲು ಸಾಧ್ಯ ಎಂದರು. ಆಶಾ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದು, ಇವರು ಸಮಾಜದ ಕಣ್ಣು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಧರಣಿ ಕುಮಾರ್ ಕಾರ್ಯಕ್ರಮದಲ್ಲಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್
ಈ ವೇಳೆ ಜಾಗೃತಿ ಜಾಥಾದಲ್ಲಿ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳು ಮತ್ತು ಮಹಿಳೆಯರು ಇನ್ನಿತರರು ಉಪಸ್ಥಿತಿಯಲಿದ್ದರು.
