ಧಾರವಾಡ | ಮೂಲಭೂತ ಸಮಸ್ಯೆಗಳಿಂದ ಕೊರಗುತ್ತಿದೆ ಹೊನ್ನಾಪುರ ಗ್ರಾಮ: ಕಣ್ಣು ತೆರೆಯಲಿದೆಯೇ ಸರ್ಕಾರ?

Date:

Advertisements

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕು ಹೊನ್ನಾಪುರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮುಖ್ಯವಾಗಿ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಹೊನ್ನಾಪುರ ಗ್ರಾಮದಲ್ಲಿ ಒಟ್ಟು 800 ರಿಂದ 1000 ಮನೆಗಳಿದ್ದು, ಮೂರು ಖಾಸಗಿ ಆಸ್ಪತ್ರೆಗಳಿವೆ. ಆದರೆ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯೇ ಇಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳು ಹತ್ತಿರದ ಮುಗದ ಅಥವಾ ಧಾರವಾಡ ಪಟ್ಟಣಕ್ಕೇ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಸಾರ್ವಜನಿಕ ಶೌಚಾಲಯಗಳೇ ಇಲ್ಲ. ಅದರಲ್ಲೂ ಮನೆಗೊಂದು ಶೌಚಾಲಯಗಳು ಇರುವುದು ಅತಿ ವಿರಳ. ಗ್ರಾಮದಲ್ಲಿ ಒಟ್ಟು ಮೂರು ಅಂಗನವಾಡಿಗಳಿದ್ದು, ಪ್ರತಿ ಮಂಗಳವಾರ ವಾರದ ಸಂತೆ ನಡೆಯುತ್ತದೆ. ಇಂತಹ ಗ್ರಾಮ ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದು ಈವರೆಗೂ ಸರ್ಕಾರವಾಗಲೀ, ಜನಪ್ರತಿನಿಧಿಗಳಾಗಲೀ ನಮ್ಮನ್ನು ಕಣ್ಣೆತ್ತಿ ನೋಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements
WhatsApp Image 2024 11 09 at 2.55.08 PM

ಹೊನ್ನಾಪುರ ಗ್ರಾಮದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದ್ದು, ವಾಲ್ಮೀಕಿ, ಲಿಂಗಾಯತ, ಪರಿಶಿಷ್ಟ ಜಾತಿ ಮತ್ತು ಪಂಗಡ, ಹಣಬರ, ಮುಸ್ಲಿಂ, ಜೈನ, ಬ್ರಾಹ್ಮಣರು ಹೀಗೆ ಎಲ್ಲ ಸಮುದಾಯದವರು ವಾಸವಾಗಿದ್ದಾರೆ. ಧಾರವಾಡದಿಂದ ಅಳ್ನಾವರದ ಕಡೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿಯೇ ಈ ಗ್ರಾಮವು ಕಾಣಸಿಗುತ್ತದೆ.

ಇಲ್ಲಿ ವಾಸವಿರುವ ನಾವು ಮೂಲತಃ ಘಟಪ್ರಭಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಅಂದರೆ 1975ರಲ್ಲಿ ಈ ಕಡೆಗೆ ವಲಸೆ ಬಂದೆವು. ಅಲ್ಲಿಂದ ಕಳೆದ 50 ವರ್ಷಗಳಿಂದ ನಾವಿಲ್ಲಿ ವಾಸ ಮಾಡುತ್ತಿದ್ದೇವೆ. ಗ್ರಾಮದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಅಭಿವೃದ್ಧಿಯಾಗಿದೆ.

ಗ್ರಾಮವು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ಚರಂಡಿ ವ್ಯವಸ್ಥೆ ಮಾಡಿಸಿದ್ದರೂ ಕೂಡ ಈವರೆಗೆ ಉಪಯೋಗಕ್ಕೆ ದೊರಕಿಲ್ಲ. ಕೊಳಚೆ ನೀರೆಲ್ಲ ಮನೆಯೊಳಗೆ ಮನೆಯ ಅಂಗಳದಲ್ಲಿಯೇ ನುಗ್ಗಿ ಬರುತ್ತದೆ. ಅಲ್ಲಲ್ಲಿ ಸೊಳ್ಳೆಗಳ ಕಾಟ, ಗಬ್ಬು ವಾಸನೆ, ಕಾಂಕ್ರೀಟ್ ರಸ್ತೆ ಮಾಡಿಸಿದ್ದರೂ ಎಲ್ಲ ಕಿತ್ತು ಹೋಗಿವೆ. ಹೀಗೆ ಗ್ರಾಮದ ತುಂಬೆಲ್ಲ ರಸ್ತೆಯ ಸಮಸ್ಯೆಗಳಿಗಂತೂ ಲೆಕ್ಕವೇ ಇಲ್ಲ. ಗ್ರಾಮ ಪಂಚಾಯತಿಯನ್ನು ಪ್ರಶ್ನಿಸಿದರೆ; ‘ನಾವೇನು ಮಾಡುವುದು? ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ’ ಎಂದು ಗ್ರಾಮದ ನಿವಾಸಿ ಐ ಬಿ ಕಲಾಜ್ ಆರೋಪಿಸುತ್ತಾರೆ.

WhatsApp Image 2024 11 09 at 2.55.09 PM

ಈ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತವ್ವನವರ ಪತಿ ಭೀಮಪ್ಪ ಚಾಕ್ರಟೀಸ್ ಮಾತನಾಡಿ, ಈಗಾಗಲೇ ಗ್ರಾಮದ ಸ್ವಚ್ಛತೆಗೆ ಎನ್.ಆರ್.ಜಿಗೆ ಅರ್ಜಿ ಹಾಕಿದ್ದಾರೆ. ಸರ್ಕಾರದಿಂದ ಅನುದಾನ ಹೆಚ್ಚು ಬರತೊಡಗಿದರೆ; ಕಾಮಗಾರಿಗಳು ಚಾಲ್ತಿಗೆ ಬರುತ್ತವೆ. ಇನ್ನು ನಮ್ಮ ಗ್ರಾಮದಲ್ಲಿ ಪ್ರಾಥಮಿಕ ಆಸ್ಪತ್ರೆ ಇಲ್ಲ. ನಾವು ಚಿಕಿತ್ಸೆಗಾಗಿ ಧಾರವಾಡದ ಕಡೆಗೇ ಹೋಗಬೇಕು. ಗ್ರಾಮ ಪಂಚಾಯಿತಿಯಿಂದಲೂ ಆದಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ಕ್ಷುಲ್ಲಕ ಕಾರಣಕ್ಕೆ ರಸ್ತೆ ಮಧ್ಯೆಯೇ ಗುಂಡಿನ ಕಾಳಗ: ಬಿಜೆಪಿ ಮುಖಂಡನ ಪುತ್ರ ಭಾಗಿ?

ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳುವುದೇ? ಅನುದಾನ ನೀಡುತ್ತಿಲ್ಲ ಎಂಬ ಆರೋಪಕ್ಕೆ ಉತ್ತರ ನೀಡುವುದೇ? ಎಂದು ಕಾದು ನೋಡಬೇಕಿದೆ.

WhatsApp Image 2024 11 09 at 2.56.14 PM
WhatsApp Image 2024 09 06 at 11.32.31 a95e9ba6
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X