ಬಿಎಂಟಿಸಿ ಚಾಲಕ ಸಾವು ಪ್ರಕರಣ; ಪರಿಹಾರ ಆದೇಶ ರದ್ದು ಮಾಡಿದ ಹೈಕೋರ್ಟ್

Date:

Advertisements

ಬೆಂಗಳೂರಿನ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಾಲಕನ ಸಾವು ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ನ್ಯಾಯಾಲಯದಲ್ಲಿ ಇರಿಸಲಾಗಿದ್ದ ಠೇವಣಿಯನ್ನೂ ಬಿಎಂಟಿಸಿಗೆ ಹಿಂದಿರುಗಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ನಗರದ ಪೀಣ್ಯ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಟಿ ಭೋಜರಾಜ 2008ರಲ್ಲಿ ಮೃತಪಟ್ಟಿದ್ದರು. ಅವರ ಸಾವಿಗೆ ಬಿಎಂಟಿಸಿ ಕೆಲಸದ ಒತ್ತಡ ಕಾರಣವೆಂದು ಪರಿಹಾರಕ್ಕಾಗಿ 2016ರಲ್ಲಿ ಮೃತನ ತಾಯಿ ವಿಚಾರಣಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

“ಕೆಲಸದ ಒತ್ತಡ ಮತ್ತು ಆಯಾಸದ ಪರಿಣಾಮ ಉಸಿರಾಟದ ತೊಂದರೆಯಿಂದ 21 ವರ್ಷದ ಭೋಜರಾಜ ಬಳಲುತ್ತಿದ್ದರು. ಅವರಿಗೆ ಉತ್ತಮ ಚಿಕಿತ್ಸೆ ನೀಡಿದರೂ, ಬದುಕುಳಿದಿಲ್ಲ. ಅವರ ಸಾವಿಗೆ ಕೆಲಸದ ಒತ್ತಡವೇ ಕಾರಣವಾಗಿದ್ದು, ಬಿಎಂಟಿಸಿ ಪರಿಹಾರ ಕೊಡಿಸಬೇಕು” ಎಂದು ದಾವೆಯಲ್ಲಿ ವರಿಸಿದ್ದರು.

Advertisements

ಅರ್ಜಿಯ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಅರ್ಜಿದಾರರಿಗೆ ಒಟ್ಟು 10,10,660 ರೂ. ಪರಿಹಾರ ಪಾವತಿಸಬೇಕೆಂದು ಬಿಎಂಟಿಸಿಗೆ ಆದೇಶಿಸಿತ್ತು.

ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದ ಬಿಎಂಟಿಸಿ, “ಚಾಲಕ ಮೃತಪಡುವ ಮುನ್ನ ಎರಡು ತಿಂಗಳಿಂದಲೂ ಉದ್ಯೋಗಕ್ಕೆ ಅನಧಿಕೃತವಾಗಿ ಗೈರಾಗಿದ್ದಾರೆ. ಅವರು ಸರಿಯಾಗಿ ಉದ್ಯೋಗಕ್ಕೆ ಹಾಜರಾಗದೇ ಇರುವುದಕ್ಕೆ ದಾಖಲೆಗಳಿವೆ. ಹಾಗಾಗಿ, ಪರಿಹಾರ ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು” ಎಂದು ಮನವಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಅಂದು-ಇಂದು – 1 | ಬದಲಾಗುತ್ತಿರುವ ಬೆಂದಕಾಳೂರು ಹಿಂದೆ ಹೇಗಿತ್ತು; ಇಲ್ಲಿ ನೋಡಿ!

ಬಿಎಂಟಿಸಿಯ ವಾದವನ್ನು ಆಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎನ್.ಎಸ್. ಸಂಜಯ ಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ, “ಚಾಲಕ ಭೋಜರಾಜ್ ಉದ್ಯೋಗಕ್ಕೆ ಸರಿಯಾಗಿ ಹಾಜರಾಗಿಲ್ಲ. ಹೀಗಾಗಿ, ಅವರು ಕೆಲಸದ ವೇಳೆ ಮೃತಪಟ್ಟಿದ್ದಾರೆ ಎಂಬುದನ್ನು ಪರಿಗಣಿಸಲಾಗದು” ಎಂದು ಹೇಳಿದ್ದು, ಪರಿಹಾರದ ಆದೇಶವನ್ನು ರದ್ದುಪಡಿಸಿದೆ. ಅಲ್ಲದೆ, ಠೇವಣಿ ಇರಿಸಲಾಗಿದ್ದ ಹಣವನ್ನು ಬಿಎಂಟಿಸಿಗೆ ಹಿಂದಿರುಗಿಸುವಂತೆ ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X