ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಎಸ್‌ ಟಿ ಸೋಮಶೇಖರ್ ವಾಗ್ದಾಳಿ

Date:

Advertisements

ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂದ್ರೆ ಕ್ಷೇತ್ರಕ್ಕೆ ಬರಲಿ. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಯಶವಂತಪುರದಲ್ಲಿ ಇಬ್ಬರು ಸ್ಪರ್ಧಿಸೋಣ ಯಾರು ಗೆಲ್ಲುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಹರಿಹಾಯ್ದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶೋಭಾ ಹೇಗೂ ಗೆದ್ದಿದ್ದಳಲ್ಲ. ತಾಕತ್ ಇದ್ದರೆ ಯಶವಂತಪುರದಲ್ಲಿ ಅವಳೂ ನಿಲ್ಲಲಿ. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗುತ್ತದೆ. ಪಾಪದ ಕೊಡ ತುಂಬುವವರೆಗೂ ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆ ಮೇಲೆ ನಾನು ಮಾತನಾಡುತ್ತೇನೆ” ಎಂದರು.

“ನನಗೆ ಏನೂ ಮಾತು ಬರಲ್ಲ ಅಂತಾ ಅಲ್ಲ. ಅವಳ ಹತ್ತರಷ್ಟು ನಾನು ಮಾತಾಡುತ್ತೇನೆ. ಚಿಕ್ಕಮಗಳೂರಿನಲ್ಲಿ ಉಗಿದ ರೀತಿ ನನ್ನನ್ನು ಏನೂ ಕ್ಷೇತ್ರದಲ್ಲಿ ಕ್ಯಾಕರಿಸಿ ಉಗಿದಿಲ್ಲ, ನನ್ನ ತಾಕತ್ ಬಗ್ಗೆ, ನನ್ನ ಬಗ್ಗೆ ಮಾತಾಡುವ ಕಿಂಚಿತ್ ಯೋಗ್ಯತೆ ಅವಳಿಗಿಲ್ಲ. ಈ ಯಮ್ಮನಿಗೆ ತಾಳ್ಮೆಯಿಂದ ಇದ್ದರೆ ಸರಿ, ಇಲ್ಲದಿದ್ದರೆ ಪಾಪದ ಕೊಡ ತುಂಬುತ್ತಿದೆ. ನೆಟ್ಟಗೆ ಕ್ಷೇತ್ರದ ಕಡೆ ಕೆಲಸ ಮಾಡಲಿ. ನನ್ನ ಬಗ್ಗೆ ಯೋಚಿಸುವುದು ಬಿಡಲಿ” ಎಂದು ಹೇಳಿದರು.

Advertisements

ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಪರ ಕಾಂಗ್ರೆಸ್ ನಾಯಕರು ಚಕ್ಕರೆ ಗ್ರಾಮದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿದರು. ಈ ವೇಳೆ, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ದಿಢೀರ್ ಪ್ರತ್ಯಕ್ಷವಾಗಿದ್ದರು. ಚನ್ನಪಟ್ಟಣದಲ್ಲಿ ನಿನ್ನೆ ಕಾಂಗ್ರೆಸ್ ಸಭೆಗೆ ಬಂದು ಹೋಗಿದ್ದ ಸೋಮಶೇಖರ್ ಇಂದು ಡಿಸಿಎಂ ಡಿಕೆಶಿ ಜೊತೆಗಿನ ಸಭೆಯಲ್ಲಿ ಬಹಿರಂಗವಾಗಿಯೇ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X