ಮಂಡ್ಯ | ವ್ಯಾಪಾರಿ ಮೇಲೆ ಲೇವಾದೇವಿದಾರನಿಂದ ಹಲ್ಲೆ: ಎಫ್ಐಆರ್ ದಾಖಲಿಸಲು ಪೊಲೀಸರಿಂದ ಮೀನಮೇಷ!

Date:

Advertisements

ಮಂಡ್ಯ ನಗರದ ಬಟ್ಟೆ ವ್ಯಾಪಾರಿಯೊಬ್ಬರ ಮೇಲೆ ಕಳೆದ ನ.6ರಂದು ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಡ್ಯ ಪೊಲೀಸರಿಗೆ ದೂರು ನೀಡಿದ್ದರೂ, ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಮಂಡ್ಯ ನಗರದ ಕೆ.ಆರ್.ರಸ್ತೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ವಾಸೀಂವುಲ್ಲಾ ಷರೀಫ್ ಎಂಬಾತನ ಮೇಲೆ ಲೇವಾದೇವಿದಾರ ರಘು ಎಂಬಾತ ಹಲ್ಲೆ ನಡೆಸಿರುವ ಬಗ್ಗೆ ಹಲವು ದಾಖಲಾತಿಗಳ ಜತೆಯಲ್ಲಿ ಮಂಡ್ಯದ ಪಶ್ಚಿಮ ಠಾಣೆಗೆ ದೂರು ನೀಡಲಾಗಿದೆ. ಆದರೆ ಪೊಲೀಸರು ಎಫ್ಐಆರ್ ದಾಖಲಿಸದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂಬ ಮಾಹಿತಿಯನ್ನು ಸಂಬಂಧಿತ ವಕೀಲರು ಈ ದಿನ.ಕಾಮ್ ಜೊತೆ ಮಾತನಾಡಿ ನೀಡಿದ್ದಾರೆ.

ಮಂಡ್ಯದಲ್ಲಿ ಬಡ್ಡಿ, ಲೇವಾದೇವಿ ಅಕ್ರಮ ದಂಧೆ ಯಾವುದೇ ಕಡಿವಾಣ ಇಲ್ಲದೆ ಜರುಗುತ್ತಿದೆ. ಆದರೆ ಇಂತಹ ಅಕ್ರಮ ದಂಧೆ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಕಣ್ಮಚ್ಚಿ ಕುಳಿತಿದ್ದಾರೆಂದು ಹಲ್ಲೆಗೊಳಗಾದ ವಾಸೀಂವುಲ್ಲಾ ಷರೀಫ್ ದೂರಿದ್ದಾರೆ.

Advertisements

ರಘು ಸಾಲವಾಗಿ ಹಣವನ್ನು ನೀಡಿದ ಸಂದರ್ಭದಲ್ಲಿ ಖಾಲಿ ಚೆಕ್‌ಗಳನ್ನು ಪಡೆದಿದ್ದಾನೆ. ಆದರೆ ಸಾಲ ತೀರಿಸಿದ ನಂತರವೂ ಖಾಲಿ ಚೆಕ್‌ಗಳನ್ನು ನೀಡದೇ, ಇನ್ನೂ ಸಾಲ ಬಾಕಿ ಉಳಿದಿದೆ, ತೀರಿಸು ಎಂದು ಅವಾಚ್ಯ ಶಬ್ದಗಳಿಂದ ಬೈದು, ಒತ್ತಡ ಹೇರುತ್ತಿದ್ದಾನೆ, ಹಾಗೇ ಹಣ ವಸೂಲಿ ನೆಪದಲ್ಲಿ ಬಂದಿದ್ದು, ಈ ಸಂದರ್ಭದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿದ್ದಾರೆ.

ರಘು ತನ್ನ ಮೇಲೆ ಬಲವಾಗಿ ಹಲ್ಲೆ ನಡೆಸಿದ ಬಗ್ಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಎಂ.ಎಲ್.ಸಿ ದಾಖಲಿಸಿ, ದೂರು ನೀಡಿದ್ದರೂ, ರಘು ಮೇಲೆ ಎಫ್ಐಆರ್ ದಾಖಲಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆಂದು ವಾಸೀಂವುಲ್ಲಾ ಷರೀಫ್ ತಿಳಿಸಿದ್ದು, ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿ ಆರೋಪಿ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಹಿಂದಕ್ಕೆ ಚಲಿಸಿ ಗ್ಯಾರೇಜಿಗೆ ನುಗ್ಗಿದ ಗ್ರಾನೈಟ್‌ ತುಂಬಿದ್ದ ಲಾರಿ: ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು!

ಹಲ್ಲೆ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರನ್ನು ಹಲ್ಲೆಗೊಳಗಾದ ಬಟ್ಟೆ ವ್ಯಾಪಾರಿ ವಕೀಲರ ಜೊತೆಗೆ ಹೋಗಿ ದಾಖಲು ಮಾಡಿರುತ್ತಾನೆ. ಆ ಪ್ರಕರಣದಲ್ಲಿ ಇನ್ನೂ ಎಫ್ಐಆರ್ ದಾಖಲಾಗದಿರುವುದು ಅಚ್ಚರಿಯ ಸಂಗತಿ. ಇದುವರೆಗೆ ಎಫ್‌ಐಆರ್ ದಾಖಲು ಆಗದಿರಲು ಕಾರಣ ಏನು? ಪಶ್ಚಿಮ ಠಾಣೆಯ ಪೊಲೀಸರು ಉತ್ತರಿಸಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X