ಹಾಸನ l ಜ. 1ರಿಂದ ಮಾ. 31 ವರೆಗೆ ರಾಗಿ,ಭತ್ತ, ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಸತ್ಯಭಾಮ

Date:

Advertisements

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಹಾಸನ ಜಿಲ್ಲೆ ರೈತರಿಂದ ರಾಗಿ, ಭತ್ತ, ಬಿಳಿಜೋಳಗಳ ಖರೀದಿ ಪ್ರಕ್ರಿಯೆಯ ಕುರಿತು ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಪ್ರತಿ ಕ್ವಿಂಟಾಲ್ ರಾಗಿ ರೂ. 4290, ಭತ್ತ 2300, ಬಿಳಿ ಜೋಳ 3321 ರೂ. ಗಳ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತದೆ. ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯ 38 ಹೋಬಳಿ ಕೇಂದ್ರಗಳಲ್ಲಿ ಡಿ.1 ರಿಂದ ರೈತರ ನೋಂದಣಿ ಕಾರ್ಯ ಪ್ರಾರಂಭ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.

ಖರೀದಿ ಕೇಂದ್ರಗಳಲ್ಲಿ ಸ್ವಚ್ಛತಾ ಕೆಲಸ ಮಾಡಲು ನಿಗಾ ವಹಿಸುವಂತೆ ಮತ್ತು ಖರೀದಿ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ತರಬೇತಿ ನೀಡುವಂತೆ ಸೂಚಿಸಿದರು. ಖರೀದಿ ಕೇಂದ್ರಗಳಲ್ಲಿ 2025 ರ ಜನವರಿ 1 ರಿಂದ ಮಾರ್ಚ್ 31ರ ವರೆಗೆ ರಾಗಿ, ಭತ್ತ ಬಿಳಿಜೋಳ ಖರೀದಿ ಮಾಡಲಾಗುತ್ತದೆ. ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

Advertisements

ಪ್ರೊಸ್ಟ್ ಐ.ಡಿ. ಕಡ್ಡಾಯವಾಗಿ ಇರಬೇಕು, ಒಂದು ಎಕರೆಗೆ ಎಷ್ಟು ಇಳುವರಿ ಬರುತ್ತದೆ ಎಂಬುದರ ಖರೀದಿ ಕೇಂದ್ರಗಳಲ್ಲಿ ಸ್ವಚ್ಚವಾಗಿ ಕೆಲಸ ಮಾಡಲು ಅನುಗುಣವಾಗಿ ರೈತರಿಂದ ಖರೀದಿಸಲು ಕ್ರಮ ವಹಿಸಬೇಕು, ನಿಗದಿತ ಬೆಲೆ, ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ತಿರಸ್ಕಾರ ಮಾಡುವಂತೆ ಹಾಗೂ ಖರೀದಿ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಾಹಿತಿ ತಿಳಿಸಿದರು.

ಖರೀದಿ ಕೇಂದ್ರದಲ್ಲಿ ರೈತರಿಗೆ ನೆರಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ರೈತರಿಗೆ ಅನುಕೂಲವಾಗವಂತೆ ಎಲ್ಲರೂ ಸೇರಿ ಒಂದು ತಂಡವಾಗಿ ಉತ್ತಮವಾಗಿ ಕರ್ತವ್ಯವನ್ನು ನಿರ್ವಹಿಸಬೇಕು. ಸಾರ್ವಜನಿಕರಿಗೆ ಮೋಸವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ತೂಕ ಮತ್ತು ಅಳತೆ ಇಲಾಖೆ ಅಧಿಕಾರಿಗಳು ನಿಗಾವಹಿಸಿ ಎಲ್ಲಾ ರೀತಿಯ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುವ ಮೂಲಕ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್

ಈ ವೇಳೆ ಜಂಟಿ ಕೃಷಿ ನಿರ್ದೇಶಕರಾದ ರಮೇಶ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಅರುಣ್ ಕುಮಾ‌ರ್, ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು ಹಾಗೂ ಮತ್ತಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X