ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ: ಬಸನಗೌಡ ಪಾಟೀಲ್ ಯತ್ನಾಳ್

Date:

Advertisements

ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೇ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ದುಂಢಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, “ದುಂಢಸಿಯಲ್ಲಿ 19 ಎಕರೆ ಜಮೀನು ವಕ್ಪ್ ಆಸ್ತಿ ಮಾಡಿದ್ದಾರೆ. ನಾನು ವಕ್ಪ್ ಬಗ್ಗೆ ಆಗ ಮಾತನಾಡಲು ವಿಶ್ವೇಶ್ವರ್ ಹೆಗಡೆ, ಬೊಮ್ಮಾಯಿ ಕಾರಣ. ಇನ್ನೂ ಎಷ್ಟು ವರ್ಷ ಇಂದಿರಾ ಗಾಂಧಿ ಅಂತ ಹೇಳುತ್ತಿರಿ, ಜಿಲೇಬಿ ಫ್ಯಾಕ್ಟರಿ ಮಾಡುತ್ತೇನೆ. ಬಟಾಟಿಯಲ್ಲಿ ಬಂಗಾರ ತೆಗೆಯುತ್ತೇನೆ ಅನ್ನುವ ಹಾಪ್ ಮ್ಯಾಡ್ ರಾಹುಲ್ ಗಾಂಧಿ ಮಾತು ಕೇಳುತ್ತೀರಾ” ಎಂದ ಪ್ರಶ್ನಿಸಿದರು.

“ವಕ್ಪ್ ಕಾಯಿದೆ ಎಷ್ಟು ಅಪಾಯಕಾರಿ ಇದೆ ನೋಡಿ, ಅವರು ಮೂವತ್ತು ಪರ್ಸೆಂಟ್ ಜನಸಂಖ್ಯೆ ಆದರೆ, ನಮ್ಮವರು ಯಾರೂ ಶಾಸಕರಾಗಲು ಸಾಧ್ಯವಿಲ್ಲ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರಿಗೆ ಹೊಲಿಕೆ ಮಾಡಿ ನೋಡಿ, ಅವರ ಅಭ್ಯರ್ಥಿ ಬಗ್ಗೆ ಅಜ್ಜಂಪೀರ್ ಖಾದ್ರಿನೇ ಅವನ ಬಣ್ಣ ಬಿಚ್ಚಿದ್ದಾನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿಕೆಶಿ ನಮ್ಮ ಮುಖಾ ನೋಡಿ ಮತ ಹಾಕಿ ಎನ್ನುತ್ತಾರೆ. ನಾವು ಯಾರ ಮುಖ ನೋಡಿ ಹಾಕಬೇಕು. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪಿಎ ಮೂಲಕ ಸರ್ಕಾರಿ ಅಧಿಕಾರಿನ ಕೊಂದಿದ್ದಾರೆ. ಸಚಿವ ತಿಮ್ಮಾಪುರ 900 ಕೋಟಿ ಲೂಟಿ ಮಾಡಿದ್ದಾರೆ. ನೀವು ಹಿಂಗೆ ಇದ್ದರೆ ಎಲ್ಲ ಆಸ್ತಿ ಹೋಗುತ್ತದೆ. ಎರಡು ಸಾವಿರ ರೂಪಾಯಿ ಮಾತ್ರ ಉಳಿಯುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಕ್ಫ್‌ ವಿವಾದದಲ್ಲಿ ಜೆಪಿಸಿ | ಹಿಂದು ವಿರೋಧಿ, ರೈತ ವಿರೋಧಿ ನೀತಿಗೇಕೆ ಬಿಜೆಪಿ ಅಂಟಿಕೊಳ್ಳುತ್ತಿದೆ?

“ಇಡೀ ಭಾರತವನ್ನು ಕಾಂಗ್ರೆಸ್ ನಾಯಕರು ವಕ್ಪ್ ಮಾಡಲು ಹೊರಟಿದ್ದಾರೆ‌. ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದೀದ್ದೇ ಆಗಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ ಇವರೊಬ್ಬ ಭಂಡ ಸಿಎಂ” ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

“ಸಿದ್ದರಾಮಯ್ಯ ಅವರ ಸರ್ಕಾರ ಬಂದು ಒಂದೂವರೆ ವರ್ಷ ಆಯಿತು ಒಂದು ಪೈಸೆ ಕೊಟ್ಟಿಲ್ಲ‌‌. ನಮಗೆ ಕ್ಷೇತ್ರದ ಅಭಿವೃದ್ದಿಗೆ ಹಣ ಕೇಳಿದರೆ, ಗ್ಯಾರಂಟಿ ಹಣ ಕೊಟ್ಟಿದ್ದೇವೆ ಎಂದು ಉಡಾಫೆಯಾಗಿ ಹೇಳುವ ಬೇಜವಾಬ್ದಾರಿ ಸರ್ಕಾರ ಹಿಂದೆಂದೂ ಕಂಡಿಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X