ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌: ವ್ಯಾಪಕ ಆಕ್ರೋಶ

Date:

Advertisements

ಚನ್ನಪಟ್ಟಣದಲ್ಲಿ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ನಡುವೆಯೇ ಜೆಡಿಎಸ್‌ನ ಕೆಲವು ಮುಖಂಡರು, ಮುಸ್ಲಿಮ್ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯ ಸಂಬಂಧ ಚನ್ನಪಟ್ಟಣದ ಮುಸ್ಲಿಂ ಸಮುದಾಯದ ಹಿರಿಯರೋರ್ವರು ನೀಡಿರುವ ಹೇಳಿಕೆಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ಹರಿದಾಡಿರುವ ಫೋಟೋ ಹಾಗೂ ವಿಡಿಯೋದಲ್ಲಿ ಒಂದು ಕವರ್‌ನಲ್ಲಿ ಒಂದು ಸಾವಿರ ಹಣ, ಮುಸ್ಲಿಮರು ನಮಾಜ್ ಮಾಡುವ ಮುಸಲ್ಲ(ಶುದ್ಧವಾದ ಬಟ್ಟೆ) ಹಾಗೂ ಕುರ್‌ಆನಿನ 36ನೇ ಪವಿತ್ರ ಸೂಕ್ತವಾದ ‘ಸೂರಃ ಯಾಸೀನ್’ನ ಒಂದು ಪ್ರತಿ ಹಾಗೂ ಮತ ನೀಡುವಂತೆ ಕರಪತ್ರ ನೀಡಿರುವುದು ಕಂಡುಬಂದಿದೆ.

Advertisements

ಈ ಬೆಳವಣಿಗೆಗೆ ಸಂಬಂಧಿಸಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಸ್ಲಿಂ ಬಾಂಧವರು ಆಕ್ರೋಶ ಹೊರಹಾಕಿದ್ದು, “ನಿಮಗೆ ಮತ ನೀಡಲು ನಮ್ಮ ಧಾರ್ಮಿಕ ನಂಬಿಕೆಗಳನ್ನು ಬಳಸಿಕೊಳ್ಳಬೇಡಿ. ಎಚ್.ಡಿ.ಕುಮಾರಸ್ವಾಮಿ ಅವರು ಕುರ್‌ಆನ್‌ನ ಪ್ರತಿಯ ಜೊತೆಗೆ 1000 ರೂ.ಗಳ ಲಂಚ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

Gb80Q9LbEAA7Nxr

“ದಯವಿಟ್ಟು ಇಂತಹ ರಾಜಕೀಯದಿಂದ ದೂರವಿರಿ. ನಮ್ಮ ಈಮಾನ್‌(ಧರ್ಮ ವಿಶ್ವಾಸ)ವನ್ನು ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ. ನಮ್ಮಲ್ಲಿ ಬಂದು ಮತ ಕೇಳಿ. ಆದರೆ, 1000 ರೂ ಹಣ ತೆಗೆದುಕೊಂಡು, ಕುರಾನ್ ಮೇಲೆ ನಿಮ್ಮ ಮತವನ್ನು ನೀಡಿ ಎಂದು ಪ್ರತಿಜ್ಞೆ ಮಾಡಿಸುವ ನಿಮ್ಮ ಈ ಕೆಲಸವನ್ನು ನಾವು ಯಾರೂ ಒಪ್ಪುವುದಿಲ್ಲ. ನಿಮ್ಮ ಮಗನ ಜಯಕ್ಕಾಗಿ, ಈ ರೀತಿಯ ಕೆಲಸಕ್ಕೆ ಕೈ ಹಾಕಬೇಡಿ. ಇದು ನಮ್ಮ ಧಾರ್ಮಿಕ ನಂಬಿಕೆಯ ವಿಚಾರವನ್ನು ಬಳಸಿಕೊಳ್ಳಬೇಡಿ” ಎಂದು ಚನ್ನಪಟ್ಟಣದ ಮುಸ್ಲಿಂ ಮುಖಂಡರು ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿಯವರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬೆಳವಣಿಗೆ ಸಂಬಂಧ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತುರುಕರ ನಿಯತ್ತು ಗೊತ್ತಿದ್ದರೂ ಸುಮ್ಮನೆ waste ಮಾಡಿದ್ದಾನೆ. ಅದೇ ಕಾಸು ಗೌಡರಿಗೆ ಕೊಟ್ಟಿದ್ರೆ ಸಾಲಿಡ್ ಆಗಿರೋದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X