ಬೀದರ್‌ | ಇಂಗ್ಲಿಷ್ ವ್ಯಾಮೋಹದಲ್ಲಿ ಕನ್ನಡ ಭಾಷೆ ಮರೆಯಬೇಡಿ : ರಾಜಕುಮಾರ್‌ ಸಾಲಿಮಠ

Date:

Advertisements

ಕರ್ನಾಟಕ ರಾಜ್ಯದ ಎಲ್ಲ ಸೌಲಭ್ಯಗಳನ್ನು ಪಡೆಯಲು ನಮ್ಮ ಸಂಪರ್ಕ ಭಾಷೆ ಕನ್ನಡವಾಗಿರಬೇಕು ಎಂದು ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಇಸಿಓ ರಾಜಕುಮಾರ ಸಾಲಿಮಠ್ ಅಭಿಪ್ರಾಯಪಟ್ಟರು.

ಭಾಲ್ಕಿ ಪಟ್ಟಣದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಶನಿವಾರ ಆಯೋಜಿಸಿದ್ದ ಕನ್ನಡ ಕಲರವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮಂಡಿಸಿದ ಅವರು, ‘ಕರ್ನಾಟಕದಲ್ಲಿ ವಾಸವಿದ್ದು, ಕರ್ನಾಟಕದ ಹಲವು ಸೌಲಭ್ಯಗಳನ್ನು ಪಡೆಯಬೇಕಾದರೆ ನಮ್ಮ ಸಂಪರ್ಕ ಭಾಷೆ ಕನ್ನಡವಾಗಿರಬೇಕು’ ಎಂದರು.

ʼಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳಾದ ಮರಾಠಿ ಮತ್ತು ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪತ್ರಿಕೆಯಲ್ಲಿಯೇ ಅತಿಹೆಚ್ಚು ಅನುತ್ತೀರ್ಣವಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳಲ್ಲಿ ಕನ್ನಡ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾಲ್ಕಿ ತಾಲೂಕು ಕಸಾಪ ಏರ್ಪಡಿಸಿದ ಕನ್ನಡ ಕಲರವ ವಿನೂತನ ಕಾರ್ಯಕ್ರಮ ಶ್ಲಾಘನೀಯ. ಇಂಗ್ಲಿಷ್ ವ್ಯಾಮೋಹದಲ್ಲಿ ನಮ್ಮ ನಾಡ ಭಾಷೆ ಮರೆಯಬಾರದು. ನಾವು ಮನೆಯಲ್ಲಿ ಯಾವುದೇ ಭಾಷೆ ಮಾತನಾಡಿದರೂ ಹೊರಗಡೆ ಕನ್ನಡ ಭಾಷೆ ಬಳಸುವುದು ರೂಢಿಸಿಕೊಳ್ಳಬೇಕುʼ ಎಂದು ಹೇಳಿದರು.

Advertisements

ಕಸಾಪ ತಾಲೂಕಾಧ್ಯಕ್ಷ ನಾಗಭೂಷಣ ಮಾಮಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ಪ್ರಯತ್ನಿಸಬೇಕು. ಇದೇ ನಾವು ಕನ್ನಡಕ್ಕೆ ಕೊಡುವ ದೊಡ್ಡ ಕೊಡುಗೆಯಾಗಿದೆ. ನಾಡು, ನುಡಿಯ ರಕ್ಷಣೆಗಾಗಿ ಸ್ಥಾಪಿತವಾದ ಕಸಾಪ ಕನ್ನಡ ನಾಡು, ಭಾಷೆ, ಸಂಸ್ಕೃತಿ. ಪರಂಪರೆ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿದೆ. ಕನ್ನಡದ ಅನೇಕ ಮಹಾತ್ಮರು ಕನ್ನಡಕ್ಕಾಗಿ ಅನುಪಮ ಸೇವೆ ಸಲ್ಲಿಸಿದ್ದು ಎಂದಿಗೂ ಮರೆಯುವಂತಿಲ್ಲʼ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜಯರಾಜ ದಾಬಶೆಟ್ಟಿ ಮಾತನಾಡಿ, ʼತಾಲೂಕಿನಲ್ಲಿ ಕಸಾಪದಿಂದ ಕನ್ನಡಪರ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಕನ್ನಡ ಉಳಿಸಿ, ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ ನೇತೃತ್ವದಲ್ಲಿ ಕಸಾಪ ಪದಾಧಿಕಾರಿಗಳು ಉತ್ತಮ ಸೇವೆ ಮಾಡುತ್ತಿರುವುದು ಶ್ಲಾಘನೀಯʼ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಸುಖದೇವ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕ ಸುಂದರರಾಜ ಹುಣಜಿಕರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯ ʼಬಿಳಿ ಬಂಗಾರʼ ಬೆಳೆಗಾರರಿಗೆ ಸಿಗದ ಪ್ರೋತ್ಸಾಹ : ಹೊರ ರಾಜ್ಯಕ್ಕೆ ಹತ್ತಿ ಮಾರಾಟ!

ಕಾರ್ಯಕ್ರಮದಲ್ಲಿ ಚಂದ್ರಕಾಂತ ತಳವಾಡೆ, ದೀಪಕ ಥಮಕೆ, ಉಪನ್ಯಾಸಕರಾದ ಲಕ್ಷ್ಮೀ, ಅನಿತಾ, ಸಂಸ್ಕೃತಿ, ಮಮಿತಾ ಉಪಸ್ಥಿತರಿದ್ದರು. ದೀಪಕ ಸ್ವಾಗತಿಸಿದರು. ಸುಂದರರಾಜ ನಿರೂಪಿಸಿದರು. ಚಂದ್ರಕಾಂತ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X