ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

Date:

Advertisements

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಸೇರಿದಂತೆ ಇತರರ ಸಮ್ಮುಖದಲ್ಲಿ ಸಿಬ್ಬಂದಿಗಳು ಮದ್ಯ ನಾಶಪಡಿಸಿದರು.

ಹಾಸನ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು ಸುದ್ದಿಗಾರರೊಂದಿಗೆ ಮಾತನಾಡಿ, “ಅಬಕಾರಿ ಮೊಕದ್ದಮೆ ಹಾಗೂ ಪೊಲೀಸ್ ಮೊಕದಮ್ಮೆಗಳಲ್ಲಿ ವಶಕ್ಕೆ ಪಡೆದ 5 ಪ್ರಕರಣಗಳಲ್ಲಿ 486.465 ಲೀಟರ್ ಮದ್ಯ, 172.310 ಲೀಟರ್ ಬಿಯರ್, 06 ಲೀಟರ್ ಕಳ್ಳಭಟ್ಟಿ, 14.5 ಲೀಟರ್ ಬೆಲ್ಲದ ಕೊಳೆ ಹಾಗೂ ಇತರೆ ವಸ್ತುಗಳನ್ನು ಅಬಕಾರಿ ಉಪ ಆಯುಕ್ತರ ಆದೇಶ‌ದಂತೆ ಇಲಾಖೆ ಅಧಿಕಾರಿಗಳ ಹಾಗೂ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಸಮ್ಮುಖದಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಮದ್ಯ ನಾಶಪಡಿಸುತ್ತಿದ್ದೇವೆ” ಎಂದು ಹೇಳಿದರು.

“ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು, ಸರಬರಾಜು ಮಾಡುವುದು ಕಂಡು ಬಂದಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮುಖ್ಯವಾಗಿ ಬಾರ್ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ ಕೊರತೆ ಬಗ್ಗೆ ದೂರು ಕಂಡುಬಂದಲ್ಲಿ ಅಂತಹವರನ್ನು ಕರೆದು ತಿಳಿ ಹೇಳುತ್ತೇವೆ. ಆದರೂ ಸರಿ ಪಡಿಸದಿದ್ದಲ್ಲಿ ಕ್ರಮಕ್ಕೆ ಮುಂದಾಗಲಿದ್ದೇವೆ” ಎಂದು ಅಬಕಾರಿ ಇಲಾಖೆ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಮಾಹಿತಿ ತಿಳಿಸಿದ್ದಾರೆ.

Advertisements

ಇದನ್ನೂ ಓದಿದ್ದೀರಾ?ಹಾಸನ | ಗರ್ಭ ಕೊರಳ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ

ಈ ವೇಳೆ ಅಬಕಾರಿ ಇಲಾಖೆ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್, ನಿರೀಕ್ಷಕಿ ಎ ಟಿ ಚಂದನ, ಅಬಕಾರಿ ಉಪ ನಿರೀಕ್ಷಕ ಹರೀಶ್ ಸಿ ಹಾಗೂ ಹಾಸನದ ಕೆಎಸ್‌ಬಿಎಲ್ ಡಿಪೋ-2 ವ್ಯವಸ್ಥಾಪಕರು ಹಾಗೂ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X