ಚುನಾವಣೆಯಲ್ಲಿ ಸೋತರೆ ಮಕ್ಕಳನ್ನು ನೋಡಿಕೊಳ್ಳಬಹುದು: ಮಹಿಳಾ ಅಭ್ಯರ್ಥಿ ಬಗ್ಗೆ ರಾಜಸ್ಥಾನ ಬಿಜೆಪಿ ಮುಖ್ಯಸ್ಥ!

Date:

Advertisements

ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಮದನ್ ರಾಥೋಡ್ ಶನಿವಾರ ಮಹಿಳಾ ಅಭ್ಯರ್ಥಿ ವಿರುದ್ಧವಾಗಿ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. “ಆರ್‌ಎಲ್‌ಪಿ ಸಂಸದ ಹನುಮಾನ್ ಬೇನಿವಾಲ್ ಅವರ ಪತ್ನಿ ಕನಿಕಾ ಬೇನಿವಾಲ್ ಖಿನ್ವಸರ್ ಅವರು ವಿಧಾನಸಭಾ ಉಪಚುನಾವಣೆಯಲ್ಲಿ ಸೋತರೆ ಪ್ರಯೋಜನವಾಗುತ್ತದೆ. ಏಕೆಂದರೆ ಅವರು ಮನೆಯಲ್ಲಿಯೇ ಇದ್ದು ತಮ್ಮ ಮಕ್ಕಳನ್ನು ನೋಡಿಕೊಳ್ಳಬಹುದು” ಎಂದು ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಮದನ್ ರಾಥೋಡ್ ಹೇಳಿದ್ದಾರೆ.

ನವೆಂಬರ್ 13ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಕನಿಕಾ ಬೇನಿವಾಲ್ ಖಿಂವ್ಸಾರ್‌ ಕ್ಷೇತ್ರದಲ್ಲಿ ಆರ್‌ಎಲ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಭಾಷಣದಲ್ಲಿ ಮಾತನಾಡಿದ ಮದನ್ ರಾಥೋಡ್, “ಹನುಮಾನ್ ಬೇನಿವಾಲ್ ಮತ್ತು ಅವರ ಪತ್ನಿ ಇಬ್ಬರೂ ರಾಜಕೀಯ ಮಾಡುತ್ತಲೇ ಇದ್ದರೆ ಅವರ ಕುಟುಂಬದ ಕಥೆ ಏನು” ಎಂದು ವ್ಯಂಗ್ಯವಾಡಿದ್ದಾರೆ.

“ತನ್ನ ಪತ್ನಿ ಗೆಲ್ಲದಿದ್ದರೆ ಆಕೆ ತನ್ನ ಪೋಷಕರ ಮನೆಗೆ ಹೋಗುತ್ತಾಳೆ ಎಂದು ಅವರು (ಹನುಮಾನ್ ಬೇನಿವಾಲ್) ಆತಂಕಗೊಂಡಿರುವುದನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇನೆ. ಸಹೋದರ, ನೀವು ತುಂಬಾ ಆತಂಕದಲ್ಲಿರುವಾಗ ನೀವು ಯಾಕೆ ಅಂತಹ ರಿಸ್ಕ್ ತೆಗೆದುಕೊಂಡಿರಿ” ಎಂದು ಲೇವಡಿ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

“ಆಕೆ ಗೆಲ್ಲಲು ಸಾಧ್ಯವಿಲ್ಲ ಎಂದು ನಿಮಗೆ (ಹನುಮಾನ್ ಬೇನಿವಾಲ್) ತಿಳಿದಿದೆ. ಆದರೆ ನನ್ನ ಬಳಿ ಒಂದು ಸಲಹೆ ಇದೆ. ಹನುಮಾನ್ ಜಿ ನಿಮ್ಮ ಪತ್ನಿ ಸೋತರೆ ನಿಮಗೆ ಲಾಭವಾಗುತ್ತದೆ. ಆಕೆ ತನ್ನ ಪೋಷಕರ ಮನೆಗೆ ಹೋಗಬಹುದು ಅಥವಾ ಅವಳು ಎಲ್ಲಿಗಾದರೂ ಹೋಗಬಹುದು. ಆದರೆ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಮಕ್ಕಳ ಪಾಲನೆ ಮಾಡಬೇಕಲ್ಲವೇ, ನೀವಿಬ್ಬರೂ ರಾಜಕೀಯ ಮಾಡುತ್ತಾ ಹೋದರೆ ಸಂಸಾರ ಏನಾಗುತ್ತೆ. ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

ಸದ್ಯ ಈ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹೆಣ್ಣು ಬರೀ ಮನೆಯಲ್ಲಿರಲು, ಮಕ್ಕಳನ್ನು ನೋಡಿಕೊಳ್ಳಲು ಮೀಸಲು ಎಂಬ ಮನಸ್ಥಿತಿಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ನಾಯಕರ ಕೀಳು ಆಲೋಚನೆ ನೋಡಿ. ರಾಜಕೀಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಕಂಡರೆ ಅವರಿಗೆ ಆಗದು. ಮಹಿಳೆ ರಾಜಕೀಯಕ್ಕೆ ಬಂದರೆ ಮಕ್ಕಳನ್ನು ಸಾಕಲು ಆಗುವುದಿಲ್ಲ ಎಂಬ ಭಾವನೆ ಅವರದ್ದು. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ಇಂತಹ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ನಾಯಕರಿಗೆ ನಾಚಿಕೆಯಾಗಬೇಕು. ಮಾತೃಶಕ್ತಿಗೆ ಮಾಡಿದ ಅವಮಾನಕ್ಕೆ ಖಿಂವ್ಸಾರ್‌ ಜನರು ಮತಗಳ ಮೂಲಕ ಉತ್ತರ ನೀಡಲಿದ್ದಾರೆ” ಎಂದು ಆ ಕ್ಷೇತ್ರದ ನಾಗರಿಕರೂ ಆದ ಆರ್‌ಎಲ್‌ಪಿಯ ಮಾಜಿ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X