ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಅತ್ಯಾಚಾರ; ಇಬ್ಬರು ಕಾಮುಕ ಶಿಕ್ಷಕರ ಬಂಧನ

Date:

Advertisements

ವೈದ್ಯಕೀಯ ಪ್ರವೇಶ ಪರೀಕ್ಷೆಗೆ (ನೀಟ್‌) ತಯಾರಿ ನಡೆಸುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ. ನೀಟ್‌ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಕಾಮುಕ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

ಕಾನ್ಪುರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿದ್ದ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಬಂಧಿತ ಆರೋಪಿಗಳು. ಈ ಇಬ್ಬರೂ ಸಂತ್ರಸ್ತ ವಿದ್ಯಾರ್ಥಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

“ಇಬ್ಬರು ಆರೋಪಿ ಶಿಕ್ಷಕರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ ಆರೋಪಗಳ ಮೇಲೆ ಬಿಎನ್‌ಎಸ್‌ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

“ಆರೋಪಿ ಸಿದ್ದಿಕಿ ಬೇರೊಬ್ಬ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಂತ್ರಸ್ತ ವಿದ್ಯಾರ್ಥಿ ಫತೇಪುರ್‌ ಮೂಲದವರಾಗಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ದಾಖಲಿಸಿರುವ ದೂರಿನಲ್ಲಿ, “ಆರೋಪಿ ಸಿದ್ದಿಕಿ ತನ್ನನ್ನು ಕಲ್ಯಾಣಪುರದ ಮಕ್ಡಿ-ಖೇರಾ ಪ್ರದೇಶದಲ್ಲಿದ್ದ ಆತನ ಸ್ನೇಹಿತರ ನಿವಾಸಕ್ಕೆ ಹೊಸ ವರ್ಷದ ಕೂಟಕ್ಕೆ ಆಹ್ವಾನಿಸಿದ್ದನು. ಜೊತೆಗೆ ಅಲ್ಲಿಗೆ ಇತರ ವಿದ್ಯಾರ್ಥಿಗಳು ಕೂಡಾ ಇರುತ್ತಾರೆಂದು ಹೇಳಿದ್ದನು. ಆದರೆ, ಆ ಸ್ಥಳಕ್ಕೆ ಹೋದಾಗ, ಅಲ್ಲಿ ಯಾರೂ ಇರಲಿಲ್ಲ. ಈ ವೇಳೆ ಸಿದ್ದಿಕಿ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ” ಎಂದು ಆರೋಪಿಸಿದ್ದರೆ.

ಅಷ್ಟೆ ಅಲ್ಲದೆ, “ದುಷ್ಕರ್ಮಿಯು ಅತ್ಯಾಚಾರದ ಕೃತ್ಯವನ್ನು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ಧಾನೆ. ವಿಡಿಯೋವನ್ನು ವೈರಲ್ ಮಾಡುವ ಬೆದರಿಯೊಡ್ಡಿ, ನನ್ನನ್ನು ತನ್ನ ಫ್ಲಾಟ್‌ನಲ್ಲಿ ಆರು ತಿಂಗಳ ಕಾಲ ಒತ್ತೆಯಾಳಾಗಿಟ್ಟುಕೊಂಡಿದ್ದು ಪದೇ ಪದೇ ಅತ್ಯಾಚಾರವೆಸಗಿದ್ದಾನೆ” ಎಂದು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X